ಬ್ರೇಕಿಂಗ್ ನ್ಯೂಸ್
26-03-22 08:27 pm HK Desk news ದೇಶ - ವಿದೇಶ
ಕಣ್ಣೂರು (ಕೇರಳ), ಮಾ.26: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ, ಬೆಳಗ್ಗೆಯೇ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು. ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶಿವನ ರೂಪವಾದ ರಾಜರಾಜೇಶ್ವರ ದೇವರಿಗೆ ಪೂಜೆ ಸಲ್ಲಿಸಿದ್ದ ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್ ಜತೆಯಲ್ಲಿ ಇದ್ದರು. ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು.


ದೇವರ ದರುಶನದ ನಂತರ ಮಾಜಿ ಮುಖ್ಯಮಂತ್ರಿಗಳು ದೇವಳಕ್ಕೆ ಸುತ್ತು ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಕೂಡ ಚುನಾವಣೆಗೆ ಮುನ್ನ ಕಣ್ಣೂರು ಜಿಲ್ಲೆಯ ತಳಿಪರಂಬ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಆನಂತರ ಪ್ರತಿ ಚುನಾವಣೆಯ ಸಂದರ್ಭದಲ್ಲಿ ತಳಿಪರಂಬ ಭೇಟಿ ನೀಡುವುದನ್ನು ರೂಢಿ ಮಾಡಿಕೊಂಡಿದ್ದಾರೆ.
HD Kumaraswamy visits Kerala Rajarajeshwari Temple along with Bandeppa Manikappa Kashempur.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm