ಬ್ರೇಕಿಂಗ್ ನ್ಯೂಸ್
26-03-22 08:27 pm HK Desk news ದೇಶ - ವಿದೇಶ
ಕಣ್ಣೂರು (ಕೇರಳ), ಮಾ.26: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ, ಬೆಳಗ್ಗೆಯೇ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು. ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶಿವನ ರೂಪವಾದ ರಾಜರಾಜೇಶ್ವರ ದೇವರಿಗೆ ಪೂಜೆ ಸಲ್ಲಿಸಿದ್ದ ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್ ಜತೆಯಲ್ಲಿ ಇದ್ದರು. ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು.


ದೇವರ ದರುಶನದ ನಂತರ ಮಾಜಿ ಮುಖ್ಯಮಂತ್ರಿಗಳು ದೇವಳಕ್ಕೆ ಸುತ್ತು ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಕೂಡ ಚುನಾವಣೆಗೆ ಮುನ್ನ ಕಣ್ಣೂರು ಜಿಲ್ಲೆಯ ತಳಿಪರಂಬ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಆನಂತರ ಪ್ರತಿ ಚುನಾವಣೆಯ ಸಂದರ್ಭದಲ್ಲಿ ತಳಿಪರಂಬ ಭೇಟಿ ನೀಡುವುದನ್ನು ರೂಢಿ ಮಾಡಿಕೊಂಡಿದ್ದಾರೆ.
HD Kumaraswamy visits Kerala Rajarajeshwari Temple along with Bandeppa Manikappa Kashempur.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm