ಬ್ರೇಕಿಂಗ್ ನ್ಯೂಸ್
02-08-20 03:05 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 2: ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೊನಾ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಿತರ ಬಗ್ಗೆ ಆರೋಗ್ಯ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಪಾಸಿಟಿವ್ ಆದ ಕೆಲವು ದಿನದ ಹಿಂದಷ್ಟೇ ಅಮಿತ್ ಷಾ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಸಿದ್ದರು ಎನ್ನಲಾಗುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಆದರೆ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲಾಗಿತ್ತು. ಅಧಿಕಾರಿಗಳು ಮತ್ತು ಸಚಿವರು ಮಾಸ್ಕ್ ಧರಿಸಿದ್ದಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಕಳೆದ ಕೆಲವು ತಿಂಗಳುಗಳಿಂದ ಕೋವಿಡ್ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಲಾಗುತ್ತಿದ್ದು ಸಂಪೂರ್ಣ ತಪಾಸಣೆ ನಡೆಸಿದ ಬಳಿಕವಷ್ಟೇ ಒಳಗೆ ಬಿಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಹಾಗಿದ್ದರೂ, ಅಮಿತ್ ಷಾ ಸ್ವತಃ ತನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ತಪಾಸಣೆಗೆ ಒಳಗಾಗುವಂತೆ ಸೂಚನೆ ನೀಡಿದ್ದಾರೆ. ಈ ನಡುವೆ, ಅಮಿತ್ ಷಾಗೆ ಸೋಂಕು ಹೇಗೆ ಹರಡಿದೆ ಅನ್ನುವ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸಚಿವರ ಸಂಪರ್ಕಕ್ಕೆ ಬಂದವರಿಗೆ ಯಾರಿಗಾದ್ರೂ ಸೋಂಕು ಇತ್ತೇ ಅನ್ನುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಕೊನೆಯ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಅಧಿಕಾರಿಗಳು ಮತ್ತು ಸಚಿವರು ಈಗ ಕ್ವಾರಂಟೈನ್ ಆಗುವ ಸಾಧ್ಯತೆಯಿದೆ. ಆದಾಗ್ಯೂ ಯಾವಾಗ ಈ ಸಭೆ ನಡೆದಿತ್ತು ಅನ್ನುವುದರ ಬಗ್ಗೆ ಖಚಿತ ಮಾಹಿತಿ ಬಿಟ್ಟುಕೊಟ್ಟಿಲ್ಲ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm