ಬ್ರೇಕಿಂಗ್ ನ್ಯೂಸ್
02-04-22 12:29 pm HK Desk news ದೇಶ - ವಿದೇಶ
ಕೊಲಂಬೋ, ಎ.2: ಶ್ರೀಲಂಕಾದಲ್ಲಿ ಜನರು ದಂಗೆಯೇಳುವ ಲಕ್ಷಣ ಕಂಡುಬಂದಿರುವುದರಿಂದ ಅಧ್ಯಕ್ಷ ಗೊಟಬಾಯ ರಾಜಪಕ್ಸ ಅವರು ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.
ಹಣದುಬ್ಬರದಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಊಟಕ್ಕೂ ತತ್ವಾರ ಎದುರಾಗಿರುವುದರಿಂದ ಜನರು ಸಾವಿರಾರು ಸಂಖ್ಯೆಯಲ್ಲಿ ಶುಕ್ರವಾರ ಅಧ್ಯಕ್ಷ ರಾಜಪಕ್ಸ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ಸಾರಿಗೆ ವಾಹನಗಳು, ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿ ತೀವ್ರ ಹಿಂಸಾಚಾರದಲ್ಲಿ ತೊಡಗಿದ್ದಾರೆ. ನೂರಾರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ರಾಜಧಾನಿ ಕೊಲಂಬೋದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು ದೇಶಾದ್ಯಂತ ಜನರು ರೊಚ್ಚಿಗೇಳುವ ಸ್ಥಿತಿ ಎದುರಾಗಿದೆ.
ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷೆ ದೃಷ್ಟಿಯಿಂದ ಎಮರ್ಜೆನ್ಸಿ ಘೋಷಿಸಲಾಗಿದೆ. ಜನರಿಗೆ ಅಗತ್ಯ ಸಾಮಗ್ರಿಗಳನ್ನು ಪೂರೈಸುವ ದೃಷ್ಟಿಯಿಂದ ಮಿಲಿಟರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಎಮರ್ಜೆನ್ಸಿ ಘೋಷಣೆಯ ಬೆನ್ನಲ್ಲೇ ಅಧ್ಯಕಅಷ ರಾಜಪಕ್ಸ ಹೇಳಿದ್ದಾರೆ. ದೇಶಾದ್ಯಂತ ಅಗತ್ಯ ವಸ್ತುಗಳ ಕೊರತೆ ಎದುರಾಗಿದ್ದು, ಜನರು ತರಕಾರಿ, ಅಕ್ಕಿ ಪಡೆಯುವುದಕ್ಕಾಗಿ ಹೈರಾಣು ಅನುಭವಿಸುತ್ತಿದ್ದಾರೆ. ಅಂಗಡಿಗಳಲ್ಲಿ ಜೀವನಾವಶ್ಯಕ ವಸ್ತುಗಳೇ ಇಲ್ಲವಾಗಿದ್ದು, ದುಬಾರಿ ದರ ಉಂಟಾಗಿದೆ.

1948ರಲ್ಲಿ ಬ್ರಿಟನ್ ಕೈಯಿಂದ ಸ್ವಾತಂತ್ರ್ಯ ಪಡೆದ ಬಳಿಕ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿಗೆ ಇಂತಹ ದುಸ್ಥಿತಿ ಉಂಟಾಗಿದೆ. ಶುಕ್ರವಾರ ರಾತ್ರಿಯೇ ಪಶ್ಚಿಮ ಶ್ರೀಲಂಕಾ ಮತ್ತು ಕೊಲಂಬೋದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿತ್ತು. ಜನರು ಹೊರ ಬರದಂತೆ ಮಿಲಿಟರಿ ಮತ್ತು ಪೊಲೀಸರ ಮೂಲಕ ತಡೆ ಹೇರಲಾಗಿದೆ. ಆದರೆ, ಜನರು ಅಧ್ಯಕ್ಷ ಮತ್ತು ಪ್ರಧಾನಿ ರಾಜಿನಾಮೆ ನೀಡುವಂತೆ ಘೋಷಣೆ ಕೂಗುತ್ತಾ ಬೀದಿಯಲ್ಲಿ ಮೆರವಣಿಗೆ ನಡೆಸಿದ್ದಾರೆ.
ದಕ್ಷಿಣ ಲಂಕಾದ ಗಾಲೆ, ಮೊರಾಟುವಾ, ಮಟಾರಾ ನಗರಗಳಲ್ಲಿ ಜನರು ದಂಗೆ ಎದ್ದಿದ್ದು, ಮಿಲಿಟರಿ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಅಧ್ಯಕ್ಷ ಮತ್ತು ಪ್ರಧಾನಿಯ ಕುಟುಂಬಸ್ಥರ ವಿರುದ್ಧ ಧಿಕ್ಕಾರ ಕೂಗುತ್ತಾ ದೇಶ ಬಿಟ್ಟು ಹೋಗುವಂತೆ ಹಿಂಸಾಚಾರ ಆರಂಭಿಸಿದ್ದಾರೆ.
President Gotabaya Rajapakse has declared a nationwide state of emergency as Sri Lanka witnessed a rebellion.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 05:36 pm
HK News Staffer
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm