ಬ್ರೇಕಿಂಗ್ ನ್ಯೂಸ್
02-04-22 12:29 pm HK Desk news ದೇಶ - ವಿದೇಶ
ಕೊಲಂಬೋ, ಎ.2: ಶ್ರೀಲಂಕಾದಲ್ಲಿ ಜನರು ದಂಗೆಯೇಳುವ ಲಕ್ಷಣ ಕಂಡುಬಂದಿರುವುದರಿಂದ ಅಧ್ಯಕ್ಷ ಗೊಟಬಾಯ ರಾಜಪಕ್ಸ ಅವರು ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.
ಹಣದುಬ್ಬರದಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಊಟಕ್ಕೂ ತತ್ವಾರ ಎದುರಾಗಿರುವುದರಿಂದ ಜನರು ಸಾವಿರಾರು ಸಂಖ್ಯೆಯಲ್ಲಿ ಶುಕ್ರವಾರ ಅಧ್ಯಕ್ಷ ರಾಜಪಕ್ಸ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ಸಾರಿಗೆ ವಾಹನಗಳು, ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿ ತೀವ್ರ ಹಿಂಸಾಚಾರದಲ್ಲಿ ತೊಡಗಿದ್ದಾರೆ. ನೂರಾರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ರಾಜಧಾನಿ ಕೊಲಂಬೋದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು ದೇಶಾದ್ಯಂತ ಜನರು ರೊಚ್ಚಿಗೇಳುವ ಸ್ಥಿತಿ ಎದುರಾಗಿದೆ.
ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷೆ ದೃಷ್ಟಿಯಿಂದ ಎಮರ್ಜೆನ್ಸಿ ಘೋಷಿಸಲಾಗಿದೆ. ಜನರಿಗೆ ಅಗತ್ಯ ಸಾಮಗ್ರಿಗಳನ್ನು ಪೂರೈಸುವ ದೃಷ್ಟಿಯಿಂದ ಮಿಲಿಟರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಎಮರ್ಜೆನ್ಸಿ ಘೋಷಣೆಯ ಬೆನ್ನಲ್ಲೇ ಅಧ್ಯಕಅಷ ರಾಜಪಕ್ಸ ಹೇಳಿದ್ದಾರೆ. ದೇಶಾದ್ಯಂತ ಅಗತ್ಯ ವಸ್ತುಗಳ ಕೊರತೆ ಎದುರಾಗಿದ್ದು, ಜನರು ತರಕಾರಿ, ಅಕ್ಕಿ ಪಡೆಯುವುದಕ್ಕಾಗಿ ಹೈರಾಣು ಅನುಭವಿಸುತ್ತಿದ್ದಾರೆ. ಅಂಗಡಿಗಳಲ್ಲಿ ಜೀವನಾವಶ್ಯಕ ವಸ್ತುಗಳೇ ಇಲ್ಲವಾಗಿದ್ದು, ದುಬಾರಿ ದರ ಉಂಟಾಗಿದೆ.
1948ರಲ್ಲಿ ಬ್ರಿಟನ್ ಕೈಯಿಂದ ಸ್ವಾತಂತ್ರ್ಯ ಪಡೆದ ಬಳಿಕ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿಗೆ ಇಂತಹ ದುಸ್ಥಿತಿ ಉಂಟಾಗಿದೆ. ಶುಕ್ರವಾರ ರಾತ್ರಿಯೇ ಪಶ್ಚಿಮ ಶ್ರೀಲಂಕಾ ಮತ್ತು ಕೊಲಂಬೋದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿತ್ತು. ಜನರು ಹೊರ ಬರದಂತೆ ಮಿಲಿಟರಿ ಮತ್ತು ಪೊಲೀಸರ ಮೂಲಕ ತಡೆ ಹೇರಲಾಗಿದೆ. ಆದರೆ, ಜನರು ಅಧ್ಯಕ್ಷ ಮತ್ತು ಪ್ರಧಾನಿ ರಾಜಿನಾಮೆ ನೀಡುವಂತೆ ಘೋಷಣೆ ಕೂಗುತ್ತಾ ಬೀದಿಯಲ್ಲಿ ಮೆರವಣಿಗೆ ನಡೆಸಿದ್ದಾರೆ.
ದಕ್ಷಿಣ ಲಂಕಾದ ಗಾಲೆ, ಮೊರಾಟುವಾ, ಮಟಾರಾ ನಗರಗಳಲ್ಲಿ ಜನರು ದಂಗೆ ಎದ್ದಿದ್ದು, ಮಿಲಿಟರಿ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಅಧ್ಯಕ್ಷ ಮತ್ತು ಪ್ರಧಾನಿಯ ಕುಟುಂಬಸ್ಥರ ವಿರುದ್ಧ ಧಿಕ್ಕಾರ ಕೂಗುತ್ತಾ ದೇಶ ಬಿಟ್ಟು ಹೋಗುವಂತೆ ಹಿಂಸಾಚಾರ ಆರಂಭಿಸಿದ್ದಾರೆ.
President Gotabaya Rajapakse has declared a nationwide state of emergency as Sri Lanka witnessed a rebellion.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm