ಬ್ರೇಕಿಂಗ್ ನ್ಯೂಸ್
02-04-22 12:29 pm HK Desk news ದೇಶ - ವಿದೇಶ
ಕೊಲಂಬೋ, ಎ.2: ಶ್ರೀಲಂಕಾದಲ್ಲಿ ಜನರು ದಂಗೆಯೇಳುವ ಲಕ್ಷಣ ಕಂಡುಬಂದಿರುವುದರಿಂದ ಅಧ್ಯಕ್ಷ ಗೊಟಬಾಯ ರಾಜಪಕ್ಸ ಅವರು ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.
ಹಣದುಬ್ಬರದಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಊಟಕ್ಕೂ ತತ್ವಾರ ಎದುರಾಗಿರುವುದರಿಂದ ಜನರು ಸಾವಿರಾರು ಸಂಖ್ಯೆಯಲ್ಲಿ ಶುಕ್ರವಾರ ಅಧ್ಯಕ್ಷ ರಾಜಪಕ್ಸ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ಸಾರಿಗೆ ವಾಹನಗಳು, ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿ ತೀವ್ರ ಹಿಂಸಾಚಾರದಲ್ಲಿ ತೊಡಗಿದ್ದಾರೆ. ನೂರಾರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ರಾಜಧಾನಿ ಕೊಲಂಬೋದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು ದೇಶಾದ್ಯಂತ ಜನರು ರೊಚ್ಚಿಗೇಳುವ ಸ್ಥಿತಿ ಎದುರಾಗಿದೆ.
ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷೆ ದೃಷ್ಟಿಯಿಂದ ಎಮರ್ಜೆನ್ಸಿ ಘೋಷಿಸಲಾಗಿದೆ. ಜನರಿಗೆ ಅಗತ್ಯ ಸಾಮಗ್ರಿಗಳನ್ನು ಪೂರೈಸುವ ದೃಷ್ಟಿಯಿಂದ ಮಿಲಿಟರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಎಮರ್ಜೆನ್ಸಿ ಘೋಷಣೆಯ ಬೆನ್ನಲ್ಲೇ ಅಧ್ಯಕಅಷ ರಾಜಪಕ್ಸ ಹೇಳಿದ್ದಾರೆ. ದೇಶಾದ್ಯಂತ ಅಗತ್ಯ ವಸ್ತುಗಳ ಕೊರತೆ ಎದುರಾಗಿದ್ದು, ಜನರು ತರಕಾರಿ, ಅಕ್ಕಿ ಪಡೆಯುವುದಕ್ಕಾಗಿ ಹೈರಾಣು ಅನುಭವಿಸುತ್ತಿದ್ದಾರೆ. ಅಂಗಡಿಗಳಲ್ಲಿ ಜೀವನಾವಶ್ಯಕ ವಸ್ತುಗಳೇ ಇಲ್ಲವಾಗಿದ್ದು, ದುಬಾರಿ ದರ ಉಂಟಾಗಿದೆ.

1948ರಲ್ಲಿ ಬ್ರಿಟನ್ ಕೈಯಿಂದ ಸ್ವಾತಂತ್ರ್ಯ ಪಡೆದ ಬಳಿಕ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿಗೆ ಇಂತಹ ದುಸ್ಥಿತಿ ಉಂಟಾಗಿದೆ. ಶುಕ್ರವಾರ ರಾತ್ರಿಯೇ ಪಶ್ಚಿಮ ಶ್ರೀಲಂಕಾ ಮತ್ತು ಕೊಲಂಬೋದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿತ್ತು. ಜನರು ಹೊರ ಬರದಂತೆ ಮಿಲಿಟರಿ ಮತ್ತು ಪೊಲೀಸರ ಮೂಲಕ ತಡೆ ಹೇರಲಾಗಿದೆ. ಆದರೆ, ಜನರು ಅಧ್ಯಕ್ಷ ಮತ್ತು ಪ್ರಧಾನಿ ರಾಜಿನಾಮೆ ನೀಡುವಂತೆ ಘೋಷಣೆ ಕೂಗುತ್ತಾ ಬೀದಿಯಲ್ಲಿ ಮೆರವಣಿಗೆ ನಡೆಸಿದ್ದಾರೆ.
ದಕ್ಷಿಣ ಲಂಕಾದ ಗಾಲೆ, ಮೊರಾಟುವಾ, ಮಟಾರಾ ನಗರಗಳಲ್ಲಿ ಜನರು ದಂಗೆ ಎದ್ದಿದ್ದು, ಮಿಲಿಟರಿ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಅಧ್ಯಕ್ಷ ಮತ್ತು ಪ್ರಧಾನಿಯ ಕುಟುಂಬಸ್ಥರ ವಿರುದ್ಧ ಧಿಕ್ಕಾರ ಕೂಗುತ್ತಾ ದೇಶ ಬಿಟ್ಟು ಹೋಗುವಂತೆ ಹಿಂಸಾಚಾರ ಆರಂಭಿಸಿದ್ದಾರೆ.
President Gotabaya Rajapakse has declared a nationwide state of emergency as Sri Lanka witnessed a rebellion.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm