ಬ್ರೇಕಿಂಗ್ ನ್ಯೂಸ್
23-09-20 01:13 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಚಂಬರ್ 23: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಒಂದೇ ದಿನ ಸುರಿದ ಮಳೆಯು 26 ವರ್ಷಗಳ ದಾಖಲೆಯನ್ನೇ ಮುರಿದಿದೆ. ಕಳೆದ 24 ಗಂಟೆಗಳಲ್ಲಿ 273.6 ಮಿಮಿ ನಷ್ಟು ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಸಂಜೆ ಶುರುವಾದ ವರುಣನ ರೌದ್ರನರ್ತನ ಬುಧವಾರ ಬೆಳಗ್ಗೆವರೆಗೂ ಮುಂದುವರಿದಿದ್ದು, ವರುಣನ ಅಬ್ಬರಕ್ಕೆ ವಾಣಿಜ್ಯನಗರಿ ಈಗಾಗಲೇ ತತ್ತರಿಸಿ ಹೋಗಿದೆ. 1994 ರಿಂದ 2020ರ ಸಪ್ಟೆಂಬರ್ ಅವಧಿಯಲ್ಲಿ ಸುರಿದ 2ನೇ ಅತಿದೊಡ್ಡ ಮಳೆಯಾಗಿದೆ. ಇನ್ನು, 1974 ರಿಂದ 2020 ಸಪ್ಟೆಂಬರ್ ಅವಧಿಯಲ್ಲಿ ಸುರಿದ 4ನೇ ಅತಿದೊಡ್ಡ ಮಳೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಮಳೆಯ ಹೊಡೆತಕ್ಕೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮುಂಬೈ ನಗರದ ಚಿತ್ರಣವೇ ಬದಲಾಗಿದೆ. ಮಳೆ ನೀರಿನ ನಡುವೆ ಸಿಲುಕಿದ ವಾಹನ ಸವಾರರ ಪರದಾಟ, ಮನೆಗಳಿಂದ ಹೊರ ಬರುವುದಕ್ಕೂ ಆಗದಂತೆ ದಿಗ್ಬಂಧನಕ್ಕೆ ಒಳಗಾಗಿರುವ ಜನರು, ಬೆಳ್ಳಂಬೆಳಗ್ಗೆ ಮಳೆಯಿಂದಾಗಿ ಜನಜೀವನ ಸ್ತಬ್ಧಗೊಂಡಿದೆ.

ಕಳೆದ ಮಂಗಳವಾರ ಸಂಜೆಯಿಂದ ಶುರುವಾದ ಮಳೆಯು ರಾತ್ರಿಯಿಡೀ ಸುರಿದಿದೆ. ಕೊಲಂಬಾದಿಂದ ಭಾಯಂದರ್ ವರೆಗಿನ ಮುಂಬೈನ ಸಂಪೂರ್ಣ ಪಶ್ಚಿಮ ಭಾಗದಲ್ಲಿ ದಟ್ಟವಾದ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳವಾರ ಸಂಜೆಯಿಂದ ಭಾರೀ ಮಳೆಯಾಗಿದೆ. ರಾತ್ರಿ 3.30 ರಿಂದ 5.30ರ ನಡುವೆ ಗುಡುಗು ಸಹಿತ ಭಾರಿ ಮಳೆಯಾಗಿರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಪಶ್ಚಿಮ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಜನರಲ್ ಕೆ.ಎಸ್.ಹೊಸಲಿಕರ್ ತಿಳಿಸಿದ್ದಾರೆ.


ಮುಂಬೈನಲ್ಲಿ ಸುರಿದ ಮಳೆಯಿಂದ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ರದ್ದುಗೊಳಿಸಲಾಗಿದೆ. ಠಾಣೆಯ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ವಶಿ ನಡುವಿನ ರೈಲ್ವೆ ಸಂಚಾರವು ಬಂದ್ ಆಗಿದೆ. ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು ಸಿಯಾನ್-ಕುರ್ಲಾ, ಚುನಭಟ್ಟಿ ಕುರ್ಲಾ ಮತ್ತು ಮಸೀದ್ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ದೂರದ ರೈಲುಗಳ ಸಂಚಾರ ಬಂದ್ ಅಥವಾ ಸಮಯ ಬದಲಾವಣೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm