ಬ್ರೇಕಿಂಗ್ ನ್ಯೂಸ್
23-09-20 01:13 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಚಂಬರ್ 23: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಒಂದೇ ದಿನ ಸುರಿದ ಮಳೆಯು 26 ವರ್ಷಗಳ ದಾಖಲೆಯನ್ನೇ ಮುರಿದಿದೆ. ಕಳೆದ 24 ಗಂಟೆಗಳಲ್ಲಿ 273.6 ಮಿಮಿ ನಷ್ಟು ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಸಂಜೆ ಶುರುವಾದ ವರುಣನ ರೌದ್ರನರ್ತನ ಬುಧವಾರ ಬೆಳಗ್ಗೆವರೆಗೂ ಮುಂದುವರಿದಿದ್ದು, ವರುಣನ ಅಬ್ಬರಕ್ಕೆ ವಾಣಿಜ್ಯನಗರಿ ಈಗಾಗಲೇ ತತ್ತರಿಸಿ ಹೋಗಿದೆ. 1994 ರಿಂದ 2020ರ ಸಪ್ಟೆಂಬರ್ ಅವಧಿಯಲ್ಲಿ ಸುರಿದ 2ನೇ ಅತಿದೊಡ್ಡ ಮಳೆಯಾಗಿದೆ. ಇನ್ನು, 1974 ರಿಂದ 2020 ಸಪ್ಟೆಂಬರ್ ಅವಧಿಯಲ್ಲಿ ಸುರಿದ 4ನೇ ಅತಿದೊಡ್ಡ ಮಳೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಮಳೆಯ ಹೊಡೆತಕ್ಕೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮುಂಬೈ ನಗರದ ಚಿತ್ರಣವೇ ಬದಲಾಗಿದೆ. ಮಳೆ ನೀರಿನ ನಡುವೆ ಸಿಲುಕಿದ ವಾಹನ ಸವಾರರ ಪರದಾಟ, ಮನೆಗಳಿಂದ ಹೊರ ಬರುವುದಕ್ಕೂ ಆಗದಂತೆ ದಿಗ್ಬಂಧನಕ್ಕೆ ಒಳಗಾಗಿರುವ ಜನರು, ಬೆಳ್ಳಂಬೆಳಗ್ಗೆ ಮಳೆಯಿಂದಾಗಿ ಜನಜೀವನ ಸ್ತಬ್ಧಗೊಂಡಿದೆ.

ಕಳೆದ ಮಂಗಳವಾರ ಸಂಜೆಯಿಂದ ಶುರುವಾದ ಮಳೆಯು ರಾತ್ರಿಯಿಡೀ ಸುರಿದಿದೆ. ಕೊಲಂಬಾದಿಂದ ಭಾಯಂದರ್ ವರೆಗಿನ ಮುಂಬೈನ ಸಂಪೂರ್ಣ ಪಶ್ಚಿಮ ಭಾಗದಲ್ಲಿ ದಟ್ಟವಾದ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳವಾರ ಸಂಜೆಯಿಂದ ಭಾರೀ ಮಳೆಯಾಗಿದೆ. ರಾತ್ರಿ 3.30 ರಿಂದ 5.30ರ ನಡುವೆ ಗುಡುಗು ಸಹಿತ ಭಾರಿ ಮಳೆಯಾಗಿರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಪಶ್ಚಿಮ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಜನರಲ್ ಕೆ.ಎಸ್.ಹೊಸಲಿಕರ್ ತಿಳಿಸಿದ್ದಾರೆ.


ಮುಂಬೈನಲ್ಲಿ ಸುರಿದ ಮಳೆಯಿಂದ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ರದ್ದುಗೊಳಿಸಲಾಗಿದೆ. ಠಾಣೆಯ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ವಶಿ ನಡುವಿನ ರೈಲ್ವೆ ಸಂಚಾರವು ಬಂದ್ ಆಗಿದೆ. ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು ಸಿಯಾನ್-ಕುರ್ಲಾ, ಚುನಭಟ್ಟಿ ಕುರ್ಲಾ ಮತ್ತು ಮಸೀದ್ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ದೂರದ ರೈಲುಗಳ ಸಂಚಾರ ಬಂದ್ ಅಥವಾ ಸಮಯ ಬದಲಾವಣೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm