ಬ್ರೇಕಿಂಗ್ ನ್ಯೂಸ್
23-09-20 01:13 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಚಂಬರ್ 23: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಒಂದೇ ದಿನ ಸುರಿದ ಮಳೆಯು 26 ವರ್ಷಗಳ ದಾಖಲೆಯನ್ನೇ ಮುರಿದಿದೆ. ಕಳೆದ 24 ಗಂಟೆಗಳಲ್ಲಿ 273.6 ಮಿಮಿ ನಷ್ಟು ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಸಂಜೆ ಶುರುವಾದ ವರುಣನ ರೌದ್ರನರ್ತನ ಬುಧವಾರ ಬೆಳಗ್ಗೆವರೆಗೂ ಮುಂದುವರಿದಿದ್ದು, ವರುಣನ ಅಬ್ಬರಕ್ಕೆ ವಾಣಿಜ್ಯನಗರಿ ಈಗಾಗಲೇ ತತ್ತರಿಸಿ ಹೋಗಿದೆ. 1994 ರಿಂದ 2020ರ ಸಪ್ಟೆಂಬರ್ ಅವಧಿಯಲ್ಲಿ ಸುರಿದ 2ನೇ ಅತಿದೊಡ್ಡ ಮಳೆಯಾಗಿದೆ. ಇನ್ನು, 1974 ರಿಂದ 2020 ಸಪ್ಟೆಂಬರ್ ಅವಧಿಯಲ್ಲಿ ಸುರಿದ 4ನೇ ಅತಿದೊಡ್ಡ ಮಳೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಮಳೆಯ ಹೊಡೆತಕ್ಕೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮುಂಬೈ ನಗರದ ಚಿತ್ರಣವೇ ಬದಲಾಗಿದೆ. ಮಳೆ ನೀರಿನ ನಡುವೆ ಸಿಲುಕಿದ ವಾಹನ ಸವಾರರ ಪರದಾಟ, ಮನೆಗಳಿಂದ ಹೊರ ಬರುವುದಕ್ಕೂ ಆಗದಂತೆ ದಿಗ್ಬಂಧನಕ್ಕೆ ಒಳಗಾಗಿರುವ ಜನರು, ಬೆಳ್ಳಂಬೆಳಗ್ಗೆ ಮಳೆಯಿಂದಾಗಿ ಜನಜೀವನ ಸ್ತಬ್ಧಗೊಂಡಿದೆ.

ಕಳೆದ ಮಂಗಳವಾರ ಸಂಜೆಯಿಂದ ಶುರುವಾದ ಮಳೆಯು ರಾತ್ರಿಯಿಡೀ ಸುರಿದಿದೆ. ಕೊಲಂಬಾದಿಂದ ಭಾಯಂದರ್ ವರೆಗಿನ ಮುಂಬೈನ ಸಂಪೂರ್ಣ ಪಶ್ಚಿಮ ಭಾಗದಲ್ಲಿ ದಟ್ಟವಾದ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳವಾರ ಸಂಜೆಯಿಂದ ಭಾರೀ ಮಳೆಯಾಗಿದೆ. ರಾತ್ರಿ 3.30 ರಿಂದ 5.30ರ ನಡುವೆ ಗುಡುಗು ಸಹಿತ ಭಾರಿ ಮಳೆಯಾಗಿರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಪಶ್ಚಿಮ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಜನರಲ್ ಕೆ.ಎಸ್.ಹೊಸಲಿಕರ್ ತಿಳಿಸಿದ್ದಾರೆ.


ಮುಂಬೈನಲ್ಲಿ ಸುರಿದ ಮಳೆಯಿಂದ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ರದ್ದುಗೊಳಿಸಲಾಗಿದೆ. ಠಾಣೆಯ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ವಶಿ ನಡುವಿನ ರೈಲ್ವೆ ಸಂಚಾರವು ಬಂದ್ ಆಗಿದೆ. ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು ಸಿಯಾನ್-ಕುರ್ಲಾ, ಚುನಭಟ್ಟಿ ಕುರ್ಲಾ ಮತ್ತು ಮಸೀದ್ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ದೂರದ ರೈಲುಗಳ ಸಂಚಾರ ಬಂದ್ ಅಥವಾ ಸಮಯ ಬದಲಾವಣೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am