ಬ್ರೇಕಿಂಗ್ ನ್ಯೂಸ್
04-04-22 01:00 pm HK Desk news ದೇಶ - ವಿದೇಶ
ನವದೆಹಲಿ, ಎ.4 : ಒಂದು ವೇಳೆ ಭಾರತದಲ್ಲಿ ಮುಸ್ಲಿಂ ಧರ್ಮದವರು ಪ್ರಧಾನಿಯಾದರೆ 50 ಶೇಕಡಾ ಹಿಂದೂಗಳು ಮತಾಂತರಗೊಳ್ಳುತ್ತಾರೆ, 40 ಪ್ರತಿಶತದಷ್ಟು ಮಂದಿ ಹತ್ಯೆಯಾಗುತ್ತಾರೆ ಮತ್ತು 10 ಪ್ರತಿಶತ ಜನರು ದೇಶ ಬಿಟ್ಟು ಹೋಗುತ್ತಾರೆ ಎಂದು ಹಿಂದು ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಾನುವಾರ ದೆಹಲಿಯಲ್ಲಿ ನಡೆದ ಹಿಂದೂ ಮಹಾಪಂಚಾಯತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಯತಿ ನರಸಿಂಗಾನಂದ್, 2029 ಅಥವಾ 2034ರಲ್ಲಿ ಅಥವಾ 2039ರ ಚುನಾವಣೆಯಲ್ಲಿ ದೇಶದಲ್ಲಿ ಮುಸ್ಲಿಂ ಪ್ರಧಾನಿಯಾಗಲಿದ್ದಾರೆ. ಒಮ್ಮೆ ಮುಸಲ್ಮಾನನೊಬ್ಬ ಪ್ರಧಾನಿಯಾದರೆ ದೇಶದಲ್ಲಿ ಶೇಕಡಾ 50 ರಷ್ಟು ಹಿಂದೂಗಳು ಮತಾಂತರಗೊಳ್ಳಬೇಕಾಗುತ್ತದೆ. ಶೇಕಡಾ 40 ರಷ್ಟು ಜನರು ಕೊಲ್ಲಲ್ಪಡುತ್ತಾರೆ ಮತ್ತು ಉಳಿದ ಶೇಕಡಾ 10 ರಷ್ಟು ಜನರು ಮುಂದಿನ 20 ವರ್ಷಗಳಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ ಅಥವಾ ಇತರ ದೇಶಗಳಿಗೆ ತೆರಳಿ ನೆಲೆಸಬೇಕಾಗುತ್ತದೆ. ಇದು ಮುಂದಿನ ಹಿಂದೂಗಳ ಭವಿಷ್ಯ. ನೀವು ಇದನ್ನು ತಪ್ಪಿಸಲು ಬಯಸಿದರೆ, ಮನುಷ್ಯನಾಗಿ ಮತ್ತು ಶಸ್ತ್ರಾಸ್ತ್ರಗಳನ್ನು ಕೈಗೆ ತೆಗೆದುಕೊಳ್ಳಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಯತಿಯ ವಿವಾದಾತ್ಮಕ ಭಾಷಣದ ಬಗ್ಗೆ, ಸೆಕ್ಷನ್ 153 ಎ ಅಡಿಯಲ್ಲಿ ಧರ್ಮಗಳ ನಡುವೆ ದ್ವೇಷ ಬಿತ್ತುವ ವಿಚಾರದಲ್ಲಿ ಎಫ್ಐಆರ್ ದಾಖಲಾಗಿದೆ. ಮತ್ತು ಭಾರತೀಯ ದಂಡ ಸಂಹಿತೆಯ 188 ಅನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ.
ಈ ಹಿಂದೆ, 2021 ರ ಡಿಸೆಂಬರ್ನಲ್ಲಿ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ನಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಯತಿ ನರಸಿಂಹಾನಂದ ಅವರನ್ನು ಬಂಧಿಸಲಾಗಿತ್ತು. ಭಾನುವಾರ ನಡೆದ ಹಿಂದು ಮಹಾಪಂಚಾಯತ್ ಕಾರ್ಯಕ್ರಮ ಸಂಬಂಧಿಸಿ ಪೊಲೀಸರು ಮೂರು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. ಒಂದು ಎಫ್ಐಆರ್ ದ್ವೇಷ ಭಾಷಣದ ಆರೋಪಕ್ಕೆ ಸಂಬಂಧಿಸಿದ್ದು ಮತ್ತು ಇನ್ನೆರಡು ಪತ್ರಕರ್ತರು ನೀಡಿದ ದೂರುಗಳ ಮೇಲೆ ದಾಖಲಾಗಿವೆ. ಕಾರ್ಯಕ್ರಮದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪತ್ರಕರ್ತರು ಹೇಳಿದ್ದಾರೆ.
Yati Narsinghanand was booked along with other speakers on Sunday for alleged hate speeches made at a “Hindu Mahapanchayat” that “50 per cent of Hindus will convert” in 20 years if a Muslim becomes the prime minister of the country.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm