ಬ್ರೇಕಿಂಗ್ ನ್ಯೂಸ್
04-04-22 01:00 pm HK Desk news ದೇಶ - ವಿದೇಶ
ನವದೆಹಲಿ, ಎ.4 : ಒಂದು ವೇಳೆ ಭಾರತದಲ್ಲಿ ಮುಸ್ಲಿಂ ಧರ್ಮದವರು ಪ್ರಧಾನಿಯಾದರೆ 50 ಶೇಕಡಾ ಹಿಂದೂಗಳು ಮತಾಂತರಗೊಳ್ಳುತ್ತಾರೆ, 40 ಪ್ರತಿಶತದಷ್ಟು ಮಂದಿ ಹತ್ಯೆಯಾಗುತ್ತಾರೆ ಮತ್ತು 10 ಪ್ರತಿಶತ ಜನರು ದೇಶ ಬಿಟ್ಟು ಹೋಗುತ್ತಾರೆ ಎಂದು ಹಿಂದು ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಾನುವಾರ ದೆಹಲಿಯಲ್ಲಿ ನಡೆದ ಹಿಂದೂ ಮಹಾಪಂಚಾಯತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಯತಿ ನರಸಿಂಗಾನಂದ್, 2029 ಅಥವಾ 2034ರಲ್ಲಿ ಅಥವಾ 2039ರ ಚುನಾವಣೆಯಲ್ಲಿ ದೇಶದಲ್ಲಿ ಮುಸ್ಲಿಂ ಪ್ರಧಾನಿಯಾಗಲಿದ್ದಾರೆ. ಒಮ್ಮೆ ಮುಸಲ್ಮಾನನೊಬ್ಬ ಪ್ರಧಾನಿಯಾದರೆ ದೇಶದಲ್ಲಿ ಶೇಕಡಾ 50 ರಷ್ಟು ಹಿಂದೂಗಳು ಮತಾಂತರಗೊಳ್ಳಬೇಕಾಗುತ್ತದೆ. ಶೇಕಡಾ 40 ರಷ್ಟು ಜನರು ಕೊಲ್ಲಲ್ಪಡುತ್ತಾರೆ ಮತ್ತು ಉಳಿದ ಶೇಕಡಾ 10 ರಷ್ಟು ಜನರು ಮುಂದಿನ 20 ವರ್ಷಗಳಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ ಅಥವಾ ಇತರ ದೇಶಗಳಿಗೆ ತೆರಳಿ ನೆಲೆಸಬೇಕಾಗುತ್ತದೆ. ಇದು ಮುಂದಿನ ಹಿಂದೂಗಳ ಭವಿಷ್ಯ. ನೀವು ಇದನ್ನು ತಪ್ಪಿಸಲು ಬಯಸಿದರೆ, ಮನುಷ್ಯನಾಗಿ ಮತ್ತು ಶಸ್ತ್ರಾಸ್ತ್ರಗಳನ್ನು ಕೈಗೆ ತೆಗೆದುಕೊಳ್ಳಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಯತಿಯ ವಿವಾದಾತ್ಮಕ ಭಾಷಣದ ಬಗ್ಗೆ, ಸೆಕ್ಷನ್ 153 ಎ ಅಡಿಯಲ್ಲಿ ಧರ್ಮಗಳ ನಡುವೆ ದ್ವೇಷ ಬಿತ್ತುವ ವಿಚಾರದಲ್ಲಿ ಎಫ್ಐಆರ್ ದಾಖಲಾಗಿದೆ. ಮತ್ತು ಭಾರತೀಯ ದಂಡ ಸಂಹಿತೆಯ 188 ಅನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ.
ಈ ಹಿಂದೆ, 2021 ರ ಡಿಸೆಂಬರ್ನಲ್ಲಿ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ನಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಯತಿ ನರಸಿಂಹಾನಂದ ಅವರನ್ನು ಬಂಧಿಸಲಾಗಿತ್ತು. ಭಾನುವಾರ ನಡೆದ ಹಿಂದು ಮಹಾಪಂಚಾಯತ್ ಕಾರ್ಯಕ್ರಮ ಸಂಬಂಧಿಸಿ ಪೊಲೀಸರು ಮೂರು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. ಒಂದು ಎಫ್ಐಆರ್ ದ್ವೇಷ ಭಾಷಣದ ಆರೋಪಕ್ಕೆ ಸಂಬಂಧಿಸಿದ್ದು ಮತ್ತು ಇನ್ನೆರಡು ಪತ್ರಕರ್ತರು ನೀಡಿದ ದೂರುಗಳ ಮೇಲೆ ದಾಖಲಾಗಿವೆ. ಕಾರ್ಯಕ್ರಮದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪತ್ರಕರ್ತರು ಹೇಳಿದ್ದಾರೆ.
Yati Narsinghanand was booked along with other speakers on Sunday for alleged hate speeches made at a “Hindu Mahapanchayat” that “50 per cent of Hindus will convert” in 20 years if a Muslim becomes the prime minister of the country.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm