ಬ್ರೇಕಿಂಗ್ ನ್ಯೂಸ್
05-04-22 12:12 pm HK Desk news ದೇಶ - ವಿದೇಶ
ಕೋಜಿಕ್ಕೋಡ್, ಎ.5 : ಹೊಳೆಯ ನಡುವೆ ಬಂಡೆಯಲ್ಲಿ ನಿಂತು ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ಮಾಡುತ್ತಿದ್ದಾಗ ಮದುಮಗ ಬಂಡೆಯಿಂದ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೋಜಿಕ್ಕೋಡ್ ಜಿಲ್ಲೆಯ ಕುತ್ಯಾಡಿ ನದಿಯಲ್ಲಿ ನಡೆದಿದೆ.
ಮೂರು ವಾರಗಳ ಹಿಂದಷ್ಟೇ ವಿವಾಹಿತರಾಗಿದ್ದ ರೆಜಿನ್ ಲಾಲ್ ಮತ್ತು ಕಾನಿಕಾ ದಂಪತಿ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಮಾಡಿಸುತ್ತಿದ್ದರು. ಹೊಳೆಯ ಮಧ್ಯದ ಬಂಡೆ ಮೇಲೆ ನಿಂತು ಪೋಸು ಕೊಡುತ್ತಿದ್ದ ವೇಳೆ ವರ ರೆಜಿನ್ ಕಾಲು ಜಾರಿ ನದಿಗೆ ಬಿದ್ದಿದ್ದಾನೆ. ಈ ವೇಳೆ ವಧು ಕೂಡ ನೀರಿಗೆ ಬಿದ್ದಿದ್ದು ಸ್ಥಳೀಯರು ಸೇರಿ ಇಬ್ಬರನ್ನೂ ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವರ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದು ವಧು ಗಂಭೀರ ಸ್ಥಿತಿಯಲ್ಲಿದ್ದಾಳೆ. ಮಾರ್ಚ್ 14 ರಂದು ಇವರ ವಿವಾಹ ನಡೆದಿತ್ತು.
ಪೆರುವಣ್ಣಮುಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ ರೆಜಿನ್ ಕುಟ್ಟಿಯಾಡಿ ಪರಿಸರದ ನಿವಾಸಿಯಾಗಿದ್ದು ನದಿಯ ಅಪಾಯದ ಬಗ್ಗೆ ಅರಿವು ಹೊಂದಿದ್ದ. ನದಿಯಲ್ಲಿ ಆಗಿಂದಾಗ್ಗೆ ಅಲೆಗಳು ಬರುವುದು, ಬಂಡೆಗೆ ಅಪ್ಪಳಿಸುವುದರಿಂದ ಅಪಾಯ ಎಂದು ಬೋರ್ಡ್ ಹಾಕಲಾಗಿತ್ತು. ಕುಟ್ಟಿಯಾಡಿಯ ಜಾನಕಿಪುಝ ಹೊಳೆಯ ಮಧ್ಯೆ ದಂಪತಿ ಫೋಟೋ ಶೂಟ್ ಮಾಡುತ್ತಿದ್ದರು.
ಬಂಡೆಗಳ ಆಕರ್ಷಣೆಯ ನಡುವೆ ಆಳವಾದ ಹೊಂಡವಿದೆ. ಹಾಗಾಗಿ ಅಲ್ಲಿಗೆ ತೆರಳುವುದು ಅಪಾಯ ಎಂದು ಸೂಚನೆ ನೀಡಲಾಗಿತ್ತು. ಇಕೋ ಟೂರಿಸಂ ಹೆಸರಲ್ಲಿ ಫೋಟೋ ಶೂಟ್ ಮಾಡಲೆಂದು ಪ್ರವಾಸಿಗರು ಬರುತ್ತಿದ್ದರು. ಆದರೆ ಸ್ಥಳೀಯ ವ್ಯಕ್ತಿಯೇ ಆಗಿರುವ ರೆಜಿನ್, ಅದೇ ಹೊಳೆಯಲ್ಲಿ ನೀರಿಗೆ ಬಿದ್ದು ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ. ಇದೇ ಜಾಗದಲ್ಲಿ ಈ ಹಿಂದೆಯೂ ದುರಂತ ಸಂಭವಿಸಿದ್ದರಿಂದ ಫೋಟೋ ಶೂಟ್ ಮಾಡದಂತೆ ನಿಷೇಧ ಹಾಕಲಾಗಿತ್ತು.
A post-wedding shoot has turned tragic for a groom, who drowned in the Kuttiadipuzha in Kozhikode. The accident happened at Janakikadupuzha in Kuttiadi, Kozhikode. The dead has been identified as Rejil of Kadiyangad in Kuttiadi. Though his wife got stuck in the water currents, was able to save her. She has been admitted in the hospital in a serious condition.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm