ಬ್ರೇಕಿಂಗ್ ನ್ಯೂಸ್
07-04-22 07:37 pm HK Desk news ದೇಶ - ವಿದೇಶ
ಹೈದರಾಬಾದ್, ಎ.7: ಕರ್ನಾಟಕದಲ್ಲಿ ಮುಂದಿನ ಚುನಾವಣೆ ದೃಷ್ಟಿಯಿಂದ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸುತ್ತಿರುವಾಗಲೇ ಆಂಧ್ರ ಪ್ರದೇಶದಲ್ಲಿ ಸಿಎಂ ಜಗನ್ಮೋಹನ್ ರೆಡ್ಡಿ ಎಲ್ಲ 24 ಸಚಿವರ ರಾಜಿನಾಮೆ ಪಡೆದು ಸಚಿವ ಸಂಪುಟವನ್ನೇ ವಿಸರ್ಜಿಸಿದ್ದಾರೆ. ಇನ್ನೆರಡು ವರ್ಷದಲ್ಲಿ ಆಂಧ್ರ ಪ್ರದೇಶವೂ ಚುನಾವಣೆ ಎದುರಿಸಲಿದ್ದು, ಈ ಹಿನ್ನೆಲೆಯಲ್ಲಿ ಓಲೈಕೆಯ ಸಚಿವ ಸಂಪುಟ ರಚಿಸಲು ಜಗನ್ ಮುಂದಾಗಿದ್ದಾರೆ.
ಹೊಸತಾಗಿ ಸಂಪುಟ ಸೇರಲಿರುವ ಸಚಿವರು ಎ.11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿಗಳಿವೆ. ಹೊಸ ಸಂಪುಟದಲ್ಲಿ ಸಿಎಂ ಜಗನ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡಲಿದ್ದಾರೆ ಎನ್ನಲಾಗುತ್ತಿದೆ. ಸಚಿವ ಸ್ಥಾನದಿಂದ ರಾಜಿನಾಮೆ ನೀಡಿರುವವರನ್ನು ಪ್ರತೀ ಜಿಲ್ಲೆಯ ಉಸ್ತುವಾರಿ ಮತ್ತು ಪಕ್ಷದ ಜವಾಬ್ದಾರಿ ನೀಡಲು ಜಗನ್ ರೆಡ್ಡಿ ಚಿಂತನೆ ನಡೆಸಿದ್ದಾರೆ. ಹೊಸ ಸಚಿವರ ಪಟ್ಟಿಯನ್ನು ಎ.10ರಂದು ಅಂತಿಮಗೊಳಿಸಲಿದ್ದಾರೆ. ಇಂದು ಮಧ್ಯಾಹ್ನ ಕ್ಯಾಬಿನೆಟ್ ಸಚಿವರ ಸಭೆ ಕರೆದು ಸಿಎಂ ಜಗನ್ಮೋಹನ್ ರೆಡ್ಡಿ ಸೂಚನೆ ನೀಡಿದ ಬೆನ್ನಲ್ಲೇ ಎಲ್ಲರೂ ರಾಜಿನಾಮೆ ಪತ್ರ ನೀಡಿದ್ದರು.

ಬುಧವಾರ ರಾಜ್ಯಪಾಲ ಬಿಸ್ವಭೂಶನ್ ಹರಿಚಂದ್ ಅವರನ್ನು ಭೇಟಿಯಾಗಿದ್ದ ಜಗನ್ ರೆಡ್ಡಿ ಸಚಿವ ಸಂಪುಟ ವಿಸರ್ಜಿಸಿ, ಹೊಸ ಸಂಪುಟ ರಚಿಸುವ ಬಗ್ಗೆ ಮಾಹಿತಿ ನೀಡಿದ್ದರು. 2019ರ ಚುನಾವಣೆಯಲ್ಲಿ ಭಾರೀ ಜಯಭೇರಿ ಗಳಿಸಿ ಅಧಿಕಾರಕ್ಕೇರಿದ್ದ ವೈಎಸ್ಆರ್ ಪಕ್ಷದ ಜಗನ್ಮೋಹನ್ ರೆಡ್ಡಿ 2024ರ ಚುನಾವಣೆ ಮುಂದಿಟ್ಟು ಹೊಸ ಸಚಿವ ಸಂಪುಟ ರಚಿಸಲಿದ್ದಾರೆ. ಮೂರು ವರ್ಷದ ಬಳಿಕ ಸಿಎಂ ಸ್ಟ್ರಾಟಜಿ ಬದಲಾಯಿಸಿದ್ದು, ಮುಂದಿನ ಚುನಾವಣೆಗೆ ರೆಡಿಯಾಗಲು ಹೊಸ ತಂಡ ಕಟ್ಟಲಿದ್ದಾರೆ. ಅಲ್ಲದೆ, ಮಂತ್ರಿಯಾದವರು ಯಾರು ಕೂಡ ಆಡಳಿತ ವಿರೋಧಿ ಅಲೆ ಎದುರಿಸುವಂತಾಗಬಾರದು. ಅದಕ್ಕಾಗಿ ಎಲ್ಲರಿಗೂ ಅವಕಾಶ ನೀಡುತ್ತಿದ್ದೇನೆ ಎಂದು ಜಗನ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಜಗನ್ ರೆಡ್ಡಿ ವಿಡಿಯೋ ಕಾನ್ಫರೆನ್ಸ್ ನಲ್ಲಿಯೇ 13 ಹೊಸ ಜಿಲ್ಲೆಗಳನ್ನು ಘೋಷಿಸಿದ್ದರು. ಇದರಿಂದ ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೇರಿದ್ದು ಪ್ರತೀ ಜಿಲ್ಲೆಗೂ ಸಂಸತ್ ಪ್ರಾತಿನಿಧ್ಯ ಸಿಗಲಿದೆ. ಆಡಳಿತ ವಿಕೇಂದ್ರೀಕರಣ, ಪ್ರತಿ ಮನೆಗೂ ಸರಕಾರದ ಯೋಜನೆ ತಲುಪಿಸುವ ಉದ್ದೇಶದಿಂದ ಜಿಲ್ಲೆಯನ್ನು ವಿಭಜಿಸಲಾಗಿದೆ ಎಂದು ಹೇಳಿದ್ದರು.
Andhra Pradesh Chief Minister YS Jagan Mohan Reddy dissolved his cabinet on Thursday following which all the 24 ministers tendered their resignations to the CM.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 05:36 pm
HK News Staffer
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm