ಬ್ರೇಕಿಂಗ್ ನ್ಯೂಸ್
24-09-20 10:04 am Headline Karnataka News Network ದೇಶ - ವಿದೇಶ
ಸೂರತ್, ಸೆಪ್ಟಂಬರ್ 24: ದೇಶದ ಪ್ರಮುಖ ಬಂದರು ಎಂದು ಗುರುತಿಸಿಕೊಂಡಿರುವ ಸೂರತ್ನ ಹಜೀರಾ ಬಂದರಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್ಜಿಸಿ) ಘಟಕದಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಭಾರೀ ಶಬ್ದ ಕೇಳಿ ನಿದ್ದೆಯಿಂದ ಎಚ್ಚರಗೊಂಡಿದ್ದು, ಬೆಂಕಿಯ ತೀವ್ರತೆಯ ಕಂಡು ಆತಂಕಗೊಂಡಿದ್ದಾರೆ. ಸದ್ಯದ ಮಾಹಿತಿಯ ಅನ್ವಯ, ಹಜೀರಾ ಬಂದರಿನ ಟರ್ಮಿನಲ್ನಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ತೀವ್ರತೆಗೆ ಬಂದರಿನ ಆಕಾಶ ಸಂಪೂರ್ಣ ಕೆಂಪಾಗಿ ಬದಲಾಗಿತ್ತು.
ಘಟನೆ ಕುರಿತಂತೆ ಸ್ಥಳೀಯ ನಿವಾಸಿಗಳು ಬೆಂಕಿ ಹೊತ್ತಿ ಉರಿಸುತ್ತಿರುವ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಂಕಿಯ ಕಾರಣದಿಂದ ಘಟನೆ ನಡೆದ ಸ್ಥಳದಿಂದ ಸುಮಾರು 10 ಕಿಮೀ ದೂರದವರೆಗೂ ಗ್ಯಾಸ್ ವಾಸನೆ ಆವರಿಸಿದೆ ಎಂದು ನಿವಾಸಿಗಳು ಹೇಳಿದ್ದರೆ. ಘಟನೆ ನಡೆದ ಸಂದರ್ಭದಲ್ಲಿ ಹಲವರು ಭೂಕಂಪನದಿಂದ ದುರಂತ ನಡೆದಿದೆ ಎಂದು ಹಲವರು ತಪ್ಪಾಗಿ ಭಾವಿಸಿದ್ದರು ಎನ್ನಲಾಗಿದೆ.
ಸ್ಫೋಟದ ಕುರಿತು ಸ್ಪಷ್ಟನೆ ನೀಡಿರುವ ಒಎನ್ಜಿಸಿ, ಹಜೀರಾ ಅನಿಲ ಸಂಸ್ಕರಣಾ ಘಟಕದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಕೊಂಡಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಅಪಘಾತ ಅಥವಾ ಗಾಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ ಕೂಡಲೇ ಘಟನಾ ಸ್ಥಳಕ್ಕೆ ಹತ್ತಿರವಾಗಿದ್ದ ರಿಲಯನ್ಸ್, ಕ್ರಿಬ್ಕೊ, ಎನ್ಟಿಪಿಸಿ, ಅದಾನಿ, ಶೆಲ್, ಗೇಲ್, ಜಿಎಸ್ಇಜಿ ಮತ್ತು ಇತರ ಹಲವು ಸ್ಥಾವರಗಳನ್ನು ಮುನ್ನೆಚ್ಚರಿಕ ಕ್ರಮವಾಗಿ ಮುಚ್ಚಲಾಗಿದೆ ಎಂಬ ಮಾಹಿತಿ ಲಭಿಸಿದೆ. ಹಜೀರಾ ಬಂದರು ಅರಬ್ಬೀ ಸಮುದ್ರದಿಂದ 8 ಕಿಮೀ ದೂರಲ್ಲಿರುವ ತಪತಿ ನದಿಯ ದಡದಲ್ಲಿದೆ. ಆಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
Major blast in #surat #hazira Any details regarding this if someone knows ? pic.twitter.com/xUitwyOFwZ
— Dhiraj Khanchandani (@dhiraj_k12) September 23, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm