ಬ್ರೇಕಿಂಗ್ ನ್ಯೂಸ್
24-09-20 10:04 am Headline Karnataka News Network ದೇಶ - ವಿದೇಶ
ಸೂರತ್, ಸೆಪ್ಟಂಬರ್ 24: ದೇಶದ ಪ್ರಮುಖ ಬಂದರು ಎಂದು ಗುರುತಿಸಿಕೊಂಡಿರುವ ಸೂರತ್ನ ಹಜೀರಾ ಬಂದರಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್ಜಿಸಿ) ಘಟಕದಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಭಾರೀ ಶಬ್ದ ಕೇಳಿ ನಿದ್ದೆಯಿಂದ ಎಚ್ಚರಗೊಂಡಿದ್ದು, ಬೆಂಕಿಯ ತೀವ್ರತೆಯ ಕಂಡು ಆತಂಕಗೊಂಡಿದ್ದಾರೆ. ಸದ್ಯದ ಮಾಹಿತಿಯ ಅನ್ವಯ, ಹಜೀರಾ ಬಂದರಿನ ಟರ್ಮಿನಲ್ನಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ತೀವ್ರತೆಗೆ ಬಂದರಿನ ಆಕಾಶ ಸಂಪೂರ್ಣ ಕೆಂಪಾಗಿ ಬದಲಾಗಿತ್ತು.
ಘಟನೆ ಕುರಿತಂತೆ ಸ್ಥಳೀಯ ನಿವಾಸಿಗಳು ಬೆಂಕಿ ಹೊತ್ತಿ ಉರಿಸುತ್ತಿರುವ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಂಕಿಯ ಕಾರಣದಿಂದ ಘಟನೆ ನಡೆದ ಸ್ಥಳದಿಂದ ಸುಮಾರು 10 ಕಿಮೀ ದೂರದವರೆಗೂ ಗ್ಯಾಸ್ ವಾಸನೆ ಆವರಿಸಿದೆ ಎಂದು ನಿವಾಸಿಗಳು ಹೇಳಿದ್ದರೆ. ಘಟನೆ ನಡೆದ ಸಂದರ್ಭದಲ್ಲಿ ಹಲವರು ಭೂಕಂಪನದಿಂದ ದುರಂತ ನಡೆದಿದೆ ಎಂದು ಹಲವರು ತಪ್ಪಾಗಿ ಭಾವಿಸಿದ್ದರು ಎನ್ನಲಾಗಿದೆ.
ಸ್ಫೋಟದ ಕುರಿತು ಸ್ಪಷ್ಟನೆ ನೀಡಿರುವ ಒಎನ್ಜಿಸಿ, ಹಜೀರಾ ಅನಿಲ ಸಂಸ್ಕರಣಾ ಘಟಕದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಕೊಂಡಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಅಪಘಾತ ಅಥವಾ ಗಾಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ ಕೂಡಲೇ ಘಟನಾ ಸ್ಥಳಕ್ಕೆ ಹತ್ತಿರವಾಗಿದ್ದ ರಿಲಯನ್ಸ್, ಕ್ರಿಬ್ಕೊ, ಎನ್ಟಿಪಿಸಿ, ಅದಾನಿ, ಶೆಲ್, ಗೇಲ್, ಜಿಎಸ್ಇಜಿ ಮತ್ತು ಇತರ ಹಲವು ಸ್ಥಾವರಗಳನ್ನು ಮುನ್ನೆಚ್ಚರಿಕ ಕ್ರಮವಾಗಿ ಮುಚ್ಚಲಾಗಿದೆ ಎಂಬ ಮಾಹಿತಿ ಲಭಿಸಿದೆ. ಹಜೀರಾ ಬಂದರು ಅರಬ್ಬೀ ಸಮುದ್ರದಿಂದ 8 ಕಿಮೀ ದೂರಲ್ಲಿರುವ ತಪತಿ ನದಿಯ ದಡದಲ್ಲಿದೆ. ಆಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
Major blast in #surat #hazira Any details regarding this if someone knows ? pic.twitter.com/xUitwyOFwZ
— Dhiraj Khanchandani (@dhiraj_k12) September 23, 2020
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm