ಬ್ರೇಕಿಂಗ್ ನ್ಯೂಸ್
24-09-20 05:50 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟಂಬರ್ 24: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ, ಖ್ಯಾತ ಕಮೆಂಟೇಟರ್ ಡೀನ್ ಜೋನ್ಸ್ ಮುಂಬೈನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಐಪಿಎಲ್ 2020 ಕ್ರಿಕೆಟ್ ಸರಣಿಯಲ್ಲಿ ಕಮೆಂಟರಿ ಗುತ್ತಿಗೆ ಪಡೆದಿದ್ದ ಡೀನ್ ಜೋನ್ಸ್ ಅದಕ್ಕಾಗಿ ಮುಂಬೈಗೆ ಬಂದಿದ್ದರು.
ಮುಂಬೈನ ಹೊಟೇಲಿನಲ್ಲಿ ಉಳಿದುಕೊಂಡಿದ್ದ ಡೀನ್ ಜೋನ್ಸ್ ಗೆ ಮಧ್ಯಾಹ್ನ 12 ಗಂಟೆಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಆಸ್ಪತ್ರೆಯಲ್ಲಿ ಡೀನ್ ಮೃತರಾಗಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಐಪಿಎಲ್ ಸರಣಿಯ ಬ್ರಾಡ್ ಕಾಸ್ಟ್ ಹೊಣೆ ಹೊತ್ತಿರುವ ಸ್ಟಾರ್ ಸ್ಪೋರ್ಟ್ಸ್, ಡೀನ್ ಜೋನ್ಸ್ ನಿಧನದ ಬಗ್ಗೆ ತೀವ್ರ ಕಂಬನಿ ಮಿಡಿದಿದೆ. ಡೀನ್ ಜೋನ್ಸ್ ಚಾಂಪಿಯನ್ ಕಮೆಂಟೇಟರ್ ಆಗಿದ್ದರು. ಅವರ ಕ್ರಿಕೆಟ್ ಕಾಮೆಂಟರಿ ಶೈಲಿ ಜಗತ್ತಿನಾದ್ಯಂತ ಇರುವ ಅಭಿಮಾನಿಗಳ ಮನಸೂರೆಗೊಳ್ಳುತ್ತಿದ್ದವು. ಕ್ರಿಕೆಟ್ ವೀಕ್ಷಕರೆಲ್ಲ ಡೀನ್ ಜೋನ್ಸ್ ಅನ್ನು ಮಿಸ್ ಮಾಡಿಕೊಳ್ಳಲಿದ್ದಾರೆ ಎಂದು ಸ್ಟಾರ್ ಸ್ಪೋರ್ಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. 1984ರಿಂದ 92ರ ನಡುವೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿದ್ದ ಡೀನ್ ಜೋನ್ಸ್, 52 ಟೆಸ್ಟ್ ಮತ್ತು 164 ಏಕದಿನ ಪಂದ್ಯಗಳನ್ನು ಆಡಿದ್ದರು.

ಡೀನ್ ಸಾವನ್ನು ನಂಬಲಾಗುತ್ತಿಲ್ಲ
ಡೀನ್ ಜೋನ್ಸ್ ಜೊತೆಗೆ ಕಮೆಂಟರಿ ಮಾಡುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ಡೀನ್ ಸಾವಿನ ಸುದ್ದಿ ಕೇಳಿ ಶಾಕ್ ಆಗಿದ್ದಾರೆ. ಅವರು ಬೆಳಗ್ಗೆ ಆರೋಗ್ಯವಾಗೇ ಇದ್ದರು. ವಿಡಿಯೋ ಕಾಲ್ ಮಾಡಿ ಅವರ ಮಕ್ಕಳ ಜೊತೆಗೆಲ್ಲ ಮಾತಾಡಿದ್ದೆ. ಅವರ ಸಾವನ್ನು ನಂಬುವುದಕ್ಕೇ ಆಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Join our WhatsApp group for latest news updates (2)
I’m deeply shocked and saddened by the demise of our fellow commentator #DeanJones He was fine in the morning. I had video call with his son two days back. Everything was fine. Everything was normal. I can’t believe this #RIP
— Irfan Pathan (@IrfanPathan) September 24, 2020
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm