ಬ್ರೇಕಿಂಗ್ ನ್ಯೂಸ್
10-05-22 01:18 pm HK Desk News ದೇಶ - ವಿದೇಶ
ನವದೆಹಲಿ, ಮೇ 10: ದೇಶಾದ್ಯಂತ ಸದ್ದು ಮಾಡಿರುವ ಕಾಶ್ಮೀರಿ ಪಂಡಿತರ ನರಮೇಧ ಕುರಿತ ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಸಿಂಗಾಪುರದಲ್ಲಿ ನಿಷೇಧದ ಬರೆ ಬೀಳುವ ಸಾಧ್ಯತೆ ಕಂಡುಬಂದಿದೆ. ಚಿತ್ರದಲ್ಲಿ ಒಂದು ವರ್ಗವನ್ನು ಟಾರ್ಗೆಟ್ ಮಾಡಲಾಗಿದ್ದು, ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿ ತೋರಿಸಲಾಗಿದೆ ಎಂದು ಸಿಂಗಾಪುರದ ಅಧಿಕಾರಿಗಳು ತಿಳಿಸಿದ್ದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಾಶ್ಮೀರ್ ಫೈಲ್ಸ್ ಚಿತ್ರವು ಸಿಂಗಾಪುರದ ಸಿನಿಮಾ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಬಿಂಬಿತವಾಗಿಲ್ಲ. ಸೂತ್ರಗಳಿಗೆ ಹೊರತಾದ ವಿಚಾರಗಳನ್ನು ತೋರಿಸುತ್ತಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. 1990ರಲ್ಲಿ ಕಾಶ್ಮೀರದಲ್ಲಿನ ಹತ್ಯಾಕಾಂಡಕ್ಕೆ ಬಲಿಯಾದ ಕುಟುಂಬದ ಕುಡಿ ಬೆಳೆದು ದೆಹಲಿಯ ಯುನಿವರ್ಸಿಟಿ ಒಂದರಲ್ಲಿ ಓದುತ್ತಿರುವುದು, ಹೆತ್ತವರ ಸಾವಿನ ಬಗ್ಗೆ ಹುಡುಕಾಟದ ಚಿತ್ರಣ ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿದೆ. ಹಳೆಯ ನೆನಪುಗಳನ್ನು ಮೆಲುಕು ಹಾಕುವ ನೆಪದಲ್ಲಿ ಹತ್ಯಾಕಾಂಡದ ಚಿತ್ರಣಗಳನ್ನು ತೋರಿಸಲಾಗಿತ್ತು. ಚಿತ್ರಕ್ಕೆ ಪ್ರಬಲ ವಿರೋಧ ಕೇಳಿಬಂದರೂ, ಭಾರತದಲ್ಲಿ ಆಡಳಿತ ಪಕ್ಷ ಬೆಂಬಲಿಸಿದ್ದರಿಂದ ದೇಶಾದ್ಯಂತ ಕಾವೇರಲು ಮತ್ತು ವಿವಾದಕ್ಕೂ ಕಾರಣವಾಗಿತ್ತು.
ಚಿತ್ರವನ್ನು ಸಿಂಗಾಪುರದಲ್ಲಿ ಪ್ರದರ್ಶನಕ್ಕೆ ಅಂಗೀಕರಿಸಲು ಸಾಧ್ಯವಿಲ್ಲ. ಕಾಶ್ಮೀರದ ಪ್ರಸಕ್ತ ಸನ್ನಿವೇಶವನ್ನು ತೋರಿಸುವ ನೆಪದಲ್ಲಿ ಚಿತ್ರದಲ್ಲಿ ಒಂದು ವರ್ಗವನ್ನು ತುಚ್ಛವಾಗಿಸಲಾಗಿದೆ. ಇದರಿಂದ ಸಮಾಜದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡಲು ಕಾರಣವಾಗುತ್ತದೆ. ಸಿಂಗಾಪುರದ ಬಹು ವೈವಿಧ್ಯದ ಸಮುದಾಯಗಳು, ಸಂಸ್ಕೃತಿ ಇರುವ ಪ್ರದೇಶದಲ್ಲಿ ಸಾಮರಸ್ಯಕ್ಕೆ ಧಕ್ಕೆ ಬರಬಹುದು. ಯಾವುದೇ ವಿಚಾರವನ್ನು ಮತ, ಧರ್ಮದ ಆಧಾರದಲ್ಲಿ ತಾರತಮ್ಯ ನೆಲೆಯಲ್ಲಿ ತೋರಿಸುವುದಕ್ಕೆ ಸಿಂಗಾಪುರದಲ್ಲಿ ನಿಷೇಧ ಇದೆ ಎಂದು ಅಲ್ಲಿನ ಅಧಿಕಾರಿಗಳು ನ್ಯೂಸ್ ಏಶಿಯಾ ಚಾನೆಲ್ ಗೆ ತಿಳಿಸಿದ್ದಾರೆ. ಆದರೆ ಸಿಂಗಾಪುರದ ಸರಕಾರ ಈ ಬಗ್ಗೆ ಅಧಿಕೃತವಾಗಿ ಯಾವುದನ್ನೂ ಹೇಳಿಕೊಂಡಿಲ್ಲ.
The Kashmir Files, directed by Vivek Agnihotri, will be banned in multi-racial Singapore now, reported PTI. The authorities have assessed the film to be 'beyond Singapore’s film classification guidelines'. The Kashmir Files, which released in India on March 11, tells the story of a university student who learns that his Kashmiri Hindu parents were killed during the Kashmir insurgency in 1990. Ever since its release, the film has created a huge noise among the audience.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm