ಬ್ರೇಕಿಂಗ್ ನ್ಯೂಸ್
25-09-20 09:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 26: ಜಿಎಸ್ ಟಿಯ ಕೇಂದ್ರದ ಪಾಲು ರಾಜ್ಯಕ್ಕೆ ಬಂದಿಲ್ಲ ಎಂಬ ದೂರಿನ ನಡುವೆಯೇ ಕೇಂದ್ರ ಸರಕಾರ ಜಿಎಸ್ ಟಿ ಸಂಗ್ರಹದಲ್ಲಿ ಎಡವಟ್ಟು ಮಾಡಿಕೊಂಡಿರುವುದು ಬಯಲಾಗಿದೆ. ರಾಜ್ಯಗಳಿಗೆ ಪರಿಹಾರ ನೀಡುವುದಕ್ಕಾಗಿ ಸಂಗ್ರಹಿಸಿದ ಜಿಎಸ್ ಟಿ ಸೆಸ್ ಪಾಲಿನ ಎರಡು ವರ್ಷದ 42,272 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರಕಾರ ಬೇರೆಡೆಗೆ ವರ್ಗಾಯಿಸಿರುವ ಬಗ್ಗೆ ಸಿಎಜಿ ಪತ್ತೆ ಮಾಡಿದೆ.
ಲೆಕ್ಕ ಪರಿಶೋಧನಾ ವರದಿಯಲ್ಲಿ ಮಹಾಲೇಖಪಾಲರು ಈ ಬಗ್ಗೆ ಬೆಳಕು ಚೆಲ್ಲಿದ್ದಾರೆ. ರಾಜ್ಯ ಸರಕಾರಗಳಿಗೆ ನೀಡಲೆಂದೇ ಇರುವ ಈ ಹಣವನ್ನು ಜಿಎಸ್ ಟಿ ಪರಿಹಾರ ಸೆಸ್ ಸಂಗ್ರಹ ನಿಧಿಗೇ ಜಮೆ ಮಾಡಬೇಕಾಗಿತ್ತು. ಆದರೆ, ಕೇಂದ್ರ ಸರಕಾರ ಜಿಎಸ್ ಟಿ ಜಾರಿಗೆ ಬಂದ 2017 ಮತ್ತು 2018ರ ಎರಡು ವರ್ಷಗಳಲ್ಲಿ ಹೀಗೆ ಸಂಗ್ರಹವಾದ ಹಣವನ್ನು ಜಿಎಸ್ ಟಿ ನಿಧಿಯಲ್ಲಿ ಉಳಿಸಿಕೊಳ್ಳದೇ ಇತರೇ ಉಪಯೋಗಕ್ಕೆ ಬಳಸಿಕೊಂಡಿದೆ ಅನ್ನುವ ಅನುಮಾನ ಕೇಳಿಬಂದಿದೆ.

ಸಿಎಜಿ ಪ್ರಕಾರ, 2017-18ರಲ್ಲಿ 62,612 ಕೋಟಿ ರೂಪಾಯಿ ಜಿಎಸ್ ಟಿ ಸೆಸ್ ಸಂಗ್ರಹವಾಗಿತ್ತು. ಈ ಪೈಕಿ 54,146 ಕೋಟಿ ರೂಪಾಯಿ ಮಾತ್ರ ಜಿಎಸ್ ಟಿ ಪರಿಹಾರ ನಿಧಿಗೆ ಜಮೆಯಾಗಿದೆ. ಇನ್ನು 2018-19ರಲ್ಲಿ ಸಂಗ್ರಹಗೊಂಡ 95,081 ಜಿಎಸ್ ಟಿ ಸೆಸ್ ಪೈಕಿ 54,275 ಕೋಟಿ ರೂ.ಗಳನ್ನು ಜಮೆ ಮಾಡಲಾಗಿತ್ತು. ಹೀಗೆ ಎರಡು ಅವಧಿಗಳಲ್ಲಿ ಜಿಎಸ್ ಟಿ ಸೆಸ್ ಹಣವನ್ನು ಕೇಂದ್ರ ಸರಕಾರ ಬೇರೆ ಉದ್ದೇಶಕ್ಕೆ ಬಳಸಿಕೊಂಡಿರುವುದನ್ನು ಸಿಎಜಿ ಪತ್ತೆ ಮಾಡಿದೆ.
ಜಿಎಸ್ ಟಿ ಪರಿಹಾರ ಸೆಸ್ ಕಾಯ್ದೆ ಪ್ರಕಾರ, ಸಂಗ್ರಹಗೊಂಡ ಪೂರ್ತಿ ಹಣವನ್ನು ಪರಿಹಾರ ನಿಧಿಗೇ ಜಮೆ ಮಾಡಬೇಕಾಗುತ್ತದೆ. ಅಲ್ಲದೆ, ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ನಿಯಮ ಇರುತ್ತದೆ. ಈ ರೀತಿ ಜಿಎಸ್ ಟಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಥವಾ ಉಳಿಸಿಕೊಳ್ಳುವುದು ಜಿಎಸ್ ಟಿ ಕಾಯ್ದೆಯ ಉಲ್ಲಂಘನೆಯಾಗಿರುತ್ತದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm