ಬ್ರೇಕಿಂಗ್ ನ್ಯೂಸ್
25-09-20 09:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 26: ಜಿಎಸ್ ಟಿಯ ಕೇಂದ್ರದ ಪಾಲು ರಾಜ್ಯಕ್ಕೆ ಬಂದಿಲ್ಲ ಎಂಬ ದೂರಿನ ನಡುವೆಯೇ ಕೇಂದ್ರ ಸರಕಾರ ಜಿಎಸ್ ಟಿ ಸಂಗ್ರಹದಲ್ಲಿ ಎಡವಟ್ಟು ಮಾಡಿಕೊಂಡಿರುವುದು ಬಯಲಾಗಿದೆ. ರಾಜ್ಯಗಳಿಗೆ ಪರಿಹಾರ ನೀಡುವುದಕ್ಕಾಗಿ ಸಂಗ್ರಹಿಸಿದ ಜಿಎಸ್ ಟಿ ಸೆಸ್ ಪಾಲಿನ ಎರಡು ವರ್ಷದ 42,272 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರಕಾರ ಬೇರೆಡೆಗೆ ವರ್ಗಾಯಿಸಿರುವ ಬಗ್ಗೆ ಸಿಎಜಿ ಪತ್ತೆ ಮಾಡಿದೆ.
ಲೆಕ್ಕ ಪರಿಶೋಧನಾ ವರದಿಯಲ್ಲಿ ಮಹಾಲೇಖಪಾಲರು ಈ ಬಗ್ಗೆ ಬೆಳಕು ಚೆಲ್ಲಿದ್ದಾರೆ. ರಾಜ್ಯ ಸರಕಾರಗಳಿಗೆ ನೀಡಲೆಂದೇ ಇರುವ ಈ ಹಣವನ್ನು ಜಿಎಸ್ ಟಿ ಪರಿಹಾರ ಸೆಸ್ ಸಂಗ್ರಹ ನಿಧಿಗೇ ಜಮೆ ಮಾಡಬೇಕಾಗಿತ್ತು. ಆದರೆ, ಕೇಂದ್ರ ಸರಕಾರ ಜಿಎಸ್ ಟಿ ಜಾರಿಗೆ ಬಂದ 2017 ಮತ್ತು 2018ರ ಎರಡು ವರ್ಷಗಳಲ್ಲಿ ಹೀಗೆ ಸಂಗ್ರಹವಾದ ಹಣವನ್ನು ಜಿಎಸ್ ಟಿ ನಿಧಿಯಲ್ಲಿ ಉಳಿಸಿಕೊಳ್ಳದೇ ಇತರೇ ಉಪಯೋಗಕ್ಕೆ ಬಳಸಿಕೊಂಡಿದೆ ಅನ್ನುವ ಅನುಮಾನ ಕೇಳಿಬಂದಿದೆ.

ಸಿಎಜಿ ಪ್ರಕಾರ, 2017-18ರಲ್ಲಿ 62,612 ಕೋಟಿ ರೂಪಾಯಿ ಜಿಎಸ್ ಟಿ ಸೆಸ್ ಸಂಗ್ರಹವಾಗಿತ್ತು. ಈ ಪೈಕಿ 54,146 ಕೋಟಿ ರೂಪಾಯಿ ಮಾತ್ರ ಜಿಎಸ್ ಟಿ ಪರಿಹಾರ ನಿಧಿಗೆ ಜಮೆಯಾಗಿದೆ. ಇನ್ನು 2018-19ರಲ್ಲಿ ಸಂಗ್ರಹಗೊಂಡ 95,081 ಜಿಎಸ್ ಟಿ ಸೆಸ್ ಪೈಕಿ 54,275 ಕೋಟಿ ರೂ.ಗಳನ್ನು ಜಮೆ ಮಾಡಲಾಗಿತ್ತು. ಹೀಗೆ ಎರಡು ಅವಧಿಗಳಲ್ಲಿ ಜಿಎಸ್ ಟಿ ಸೆಸ್ ಹಣವನ್ನು ಕೇಂದ್ರ ಸರಕಾರ ಬೇರೆ ಉದ್ದೇಶಕ್ಕೆ ಬಳಸಿಕೊಂಡಿರುವುದನ್ನು ಸಿಎಜಿ ಪತ್ತೆ ಮಾಡಿದೆ.
ಜಿಎಸ್ ಟಿ ಪರಿಹಾರ ಸೆಸ್ ಕಾಯ್ದೆ ಪ್ರಕಾರ, ಸಂಗ್ರಹಗೊಂಡ ಪೂರ್ತಿ ಹಣವನ್ನು ಪರಿಹಾರ ನಿಧಿಗೇ ಜಮೆ ಮಾಡಬೇಕಾಗುತ್ತದೆ. ಅಲ್ಲದೆ, ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ನಿಯಮ ಇರುತ್ತದೆ. ಈ ರೀತಿ ಜಿಎಸ್ ಟಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಥವಾ ಉಳಿಸಿಕೊಳ್ಳುವುದು ಜಿಎಸ್ ಟಿ ಕಾಯ್ದೆಯ ಉಲ್ಲಂಘನೆಯಾಗಿರುತ್ತದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm