ಬ್ರೇಕಿಂಗ್ ನ್ಯೂಸ್
25-09-20 09:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 26: ಜಿಎಸ್ ಟಿಯ ಕೇಂದ್ರದ ಪಾಲು ರಾಜ್ಯಕ್ಕೆ ಬಂದಿಲ್ಲ ಎಂಬ ದೂರಿನ ನಡುವೆಯೇ ಕೇಂದ್ರ ಸರಕಾರ ಜಿಎಸ್ ಟಿ ಸಂಗ್ರಹದಲ್ಲಿ ಎಡವಟ್ಟು ಮಾಡಿಕೊಂಡಿರುವುದು ಬಯಲಾಗಿದೆ. ರಾಜ್ಯಗಳಿಗೆ ಪರಿಹಾರ ನೀಡುವುದಕ್ಕಾಗಿ ಸಂಗ್ರಹಿಸಿದ ಜಿಎಸ್ ಟಿ ಸೆಸ್ ಪಾಲಿನ ಎರಡು ವರ್ಷದ 42,272 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರಕಾರ ಬೇರೆಡೆಗೆ ವರ್ಗಾಯಿಸಿರುವ ಬಗ್ಗೆ ಸಿಎಜಿ ಪತ್ತೆ ಮಾಡಿದೆ.
ಲೆಕ್ಕ ಪರಿಶೋಧನಾ ವರದಿಯಲ್ಲಿ ಮಹಾಲೇಖಪಾಲರು ಈ ಬಗ್ಗೆ ಬೆಳಕು ಚೆಲ್ಲಿದ್ದಾರೆ. ರಾಜ್ಯ ಸರಕಾರಗಳಿಗೆ ನೀಡಲೆಂದೇ ಇರುವ ಈ ಹಣವನ್ನು ಜಿಎಸ್ ಟಿ ಪರಿಹಾರ ಸೆಸ್ ಸಂಗ್ರಹ ನಿಧಿಗೇ ಜಮೆ ಮಾಡಬೇಕಾಗಿತ್ತು. ಆದರೆ, ಕೇಂದ್ರ ಸರಕಾರ ಜಿಎಸ್ ಟಿ ಜಾರಿಗೆ ಬಂದ 2017 ಮತ್ತು 2018ರ ಎರಡು ವರ್ಷಗಳಲ್ಲಿ ಹೀಗೆ ಸಂಗ್ರಹವಾದ ಹಣವನ್ನು ಜಿಎಸ್ ಟಿ ನಿಧಿಯಲ್ಲಿ ಉಳಿಸಿಕೊಳ್ಳದೇ ಇತರೇ ಉಪಯೋಗಕ್ಕೆ ಬಳಸಿಕೊಂಡಿದೆ ಅನ್ನುವ ಅನುಮಾನ ಕೇಳಿಬಂದಿದೆ.

ಸಿಎಜಿ ಪ್ರಕಾರ, 2017-18ರಲ್ಲಿ 62,612 ಕೋಟಿ ರೂಪಾಯಿ ಜಿಎಸ್ ಟಿ ಸೆಸ್ ಸಂಗ್ರಹವಾಗಿತ್ತು. ಈ ಪೈಕಿ 54,146 ಕೋಟಿ ರೂಪಾಯಿ ಮಾತ್ರ ಜಿಎಸ್ ಟಿ ಪರಿಹಾರ ನಿಧಿಗೆ ಜಮೆಯಾಗಿದೆ. ಇನ್ನು 2018-19ರಲ್ಲಿ ಸಂಗ್ರಹಗೊಂಡ 95,081 ಜಿಎಸ್ ಟಿ ಸೆಸ್ ಪೈಕಿ 54,275 ಕೋಟಿ ರೂ.ಗಳನ್ನು ಜಮೆ ಮಾಡಲಾಗಿತ್ತು. ಹೀಗೆ ಎರಡು ಅವಧಿಗಳಲ್ಲಿ ಜಿಎಸ್ ಟಿ ಸೆಸ್ ಹಣವನ್ನು ಕೇಂದ್ರ ಸರಕಾರ ಬೇರೆ ಉದ್ದೇಶಕ್ಕೆ ಬಳಸಿಕೊಂಡಿರುವುದನ್ನು ಸಿಎಜಿ ಪತ್ತೆ ಮಾಡಿದೆ.
ಜಿಎಸ್ ಟಿ ಪರಿಹಾರ ಸೆಸ್ ಕಾಯ್ದೆ ಪ್ರಕಾರ, ಸಂಗ್ರಹಗೊಂಡ ಪೂರ್ತಿ ಹಣವನ್ನು ಪರಿಹಾರ ನಿಧಿಗೇ ಜಮೆ ಮಾಡಬೇಕಾಗುತ್ತದೆ. ಅಲ್ಲದೆ, ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ನಿಯಮ ಇರುತ್ತದೆ. ಈ ರೀತಿ ಜಿಎಸ್ ಟಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಥವಾ ಉಳಿಸಿಕೊಳ್ಳುವುದು ಜಿಎಸ್ ಟಿ ಕಾಯ್ದೆಯ ಉಲ್ಲಂಘನೆಯಾಗಿರುತ್ತದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm