ಬ್ರೇಕಿಂಗ್ ನ್ಯೂಸ್
12-05-22 08:59 pm HK Desk News ದೇಶ - ವಿದೇಶ
ನವದೆಹಲಿ, ಮೇ 12: ವೃದ್ಧ ದಂಪತಿಗೆ ಮೊಮ್ಮಕ್ಕಳ ಮುಖ ನೋಡಬೇಕು, ಅವರ ಜೊತೆ ಆಟ ಆಡಬೇಕು ಅನ್ನೋ ಆಸೆ. ಆದರೆ ಮಗ - ಸೊಸೆ ಮದುವೆ ಆಗಿ 6 ವರ್ಷವಾದರೂ ಮಕ್ಕಳು ಮಾಡುವುದನ್ನು ಮರೆತಿದ್ದಾರೆ ಎನ್ನುವ ಸಿಟ್ಟು ವೃದ್ಧ ದಂಪತಿಯದ್ದು. ಇದೇ ಕಾರಣಕ್ಕೆ ವೃದ್ಧ ದಂಪತಿ ಈಗ ಮಗ-ಸೊಸೆಯ ವಿರುದ್ಧವೇ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.
ಒಂದು ವರ್ಷದೊಳಗೆ ಮಗ-ಸೊಸೆ ತಮಗೆ ಮೊಮ್ಮಗುವನ್ನ ಕೊಡಬೇಕು, ಇಲ್ಲದೇ ಹೋದರೆ 5 ಕೋಟಿ ರೂಪಾಯಿ ಪರಿಹಾರ ನೀಡಬೇಕು ಅಂತ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣ ನಡೆದಿರೋದು ಉತ್ತರಾಖಂಡದ ಹರಿದ್ವಾರದಲ್ಲಿ. ಸಂಜೀವ ಪ್ರಸಾದ್ ಮತ್ತು ಅವರ ಪತ್ನಿ ಸಾಧನಾ ಪ್ರಸಾದ್ ಈಗ ಮೊಮ್ಮಗುವಿನ ಮುಖ ನೋಡುವ ಆಸೆಯಿಂದ ಮಗ - ಸೊಸೆಯ ವಿರುದ್ಧವೇ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅವರಿಗೆ ಮಗು ಗಂಡು, ಹೆಣ್ಣು ಯಾವುದಾದ್ರೂ ಓಕೆ. ಮೊಮ್ಮಗು ಇದ್ದರೆ ಸಾಕು ಅಂತ ಹೇಳುತ್ತಿದ್ದಾರೆ.

ಮಗನ ಶಿಕ್ಷಣ, ಆತನನ್ನ ಅಮೆರಿಕಾ ಕಳುಹಿಸುವ ಸಲುವಾಗಿ ಇದ್ದ ಹಣವನ್ನೆಲ್ಲ ಖರ್ಚು ಮಾಡಿದ್ದೇನೆ. ಎರಡು ಕೋಟಿ ಖರ್ಚು ಮಾಡಿ ಮದುವೆ ಮಾಡಿ ಹನಿಮೂನ್ ಮಾಡಲು ಥೈಲ್ಯಾಂಡ್ ಕಳಿಸಿಕೊಟ್ಟಿದ್ದೇನೆ. ಆನಂತರ ಹಣ ಇಲ್ಲದೆ ಸ್ವಂತ ಮನೆಗಾಗಿ ಸಾಲ ಮಾಡಿದ್ದೇನೆ. ಈಗ ನಾನು ಆರ್ಥಿಕ ಸಮಸ್ಯೆಯನ್ನ ಎದುರಿಸ್ತಾ ಇದ್ದೇನೆ. ಮಗನಿಗೆ ಎಷ್ಟು ಹೇಳಿದರೂ ಇತ್ತ ಗಮನ ಹರಿಸುತ್ತಿಲ್ಲ. ತಾನು ಇಷ್ಟೆಲ್ಲ ಸಮಸ್ಯೆ ಎದುರಿಸುತ್ತಿದ್ದರೂ ಮಗನಿಗೆ ನಮ್ಮ ಬಗ್ಗೆ ಕಾಳಜಿಯೇ ಇಲ್ಲ. ಆದ್ದರಿಂದ ನಾನು ಮತ್ತು ನನ್ನ ಹೆಂಡತಿ ಇಬ್ಬರು ಸೇರಿ ಮಗ - ಸೊಸೆಯ ವಿರುದ್ಧವೇ ಕೇಸ್ ಹಾಕಿದ್ದೇವೆ ಎಂದು ಸಂಜೀವ ಪ್ರಸಾದ್ ಹೇಳಿದ್ದಾರೆ.
ದಂಪತಿ ತಮ್ಮ ಪುತ್ರ ಶ್ರೇಯ್ ಸಾಗರ್ ಗೆ 2016 ರಲ್ಲಿ ಶುಭಾಂಗಿ ಎಂಬ ವಧುವಿನ ಜೊತೆಗೆ ಮದುವೆ ಮಾಡಿದ್ದರು. ಆನಂತರ ಮೊಮ್ಮಗು ಬೇಕೆಂದು ತಮ್ಮದೇ ಖರ್ಚಿನಲ್ಲಿ ಹನಿಮೂನ್ ಕಳಿಸಿದ್ದರು. ಅದಕ್ಕೂ ಮೊದಲು ಮಗನಿಗೆ 65 ಲಕ್ಷ ಖರ್ಚು ಮಾಡಿ ಅಮೆರಿಕದಲ್ಲಿ ವಿಮಾನದ ಪೈಲಟ್ ಓದಿಸಿದ್ದರು. ಈಗ ಮೊಮ್ಮಗುವಿನ ಬಗ್ಗೆ ಕೇಳಿದರೆ, ಮಗ ಸೊಸೆ ಕೇರ್ ಮಾಡುತ್ತಿಲ್ಲ. ನಮ್ಮನ್ನು ನೋಡಿಕೊಳ್ಳುವುದಕ್ಕೂ ತಯಾರಿಲ್ಲ ಎಂದು ಸಂಜೀವ ಪ್ರಸಾದ್ ಅಲವತ್ತುಕೊಂಡಿದ್ದಾರೆ.
In a bizzare case, a couple has moved a court against their son and daughter-in-law and has demanded either a grandchild or Rs 5 crore in compensation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm