ಬ್ರೇಕಿಂಗ್ ನ್ಯೂಸ್
12-05-22 10:59 pm HK Desk News ದೇಶ - ವಿದೇಶ
ಕೊಲಂಬೋ, ಮೇ 12 : ಅರಾಜಕತೆ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ದೇಶ ಶ್ರೀಲಂಕಾದಲ್ಲಿ ಹೊಸ ಪ್ರಧಾನಿಯಾಗಿ ಹಿರಿಯ ಶಾಸಕ ರನಿಲ್ ವಿಕ್ರಮಸಿಂಘೆ ಅಧಿಕಾರ ಸ್ವೀಕರಿಸಿದ್ದಾರೆ.
ಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸ ಅವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ದೇಶಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ನೂತನ ಪ್ರಧಾನಿಯ ಪ್ರಮಾಣ ವಚನ ಮಹತ್ವದ ಹೆಜ್ಜೆಯಾಗಿದೆ.
ಸರ್ಕಾರ ವಿರೋಧಿ ಪ್ರತಿಭಟನಾಕಾರರು ಮತ್ತು ಮಾಜಿ ಪ್ರಧಾನಿ ಮಹೀಂದ್ರ ರಾಜಪಕ್ಸ ಬೆಂಬಲಿಗರು ನಡೆಸಿದ ಹಿಂಸಾತ್ಮಕ ದಾಳಿಯ ನಂತರ ಮಹಿಂದಾ ರಾಜಪಕ್ಸೆ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಧಾನಿ ರಾಜೀನಾಮೆಯಿಂದ ಕ್ಯಾಬಿನೆಟ್ ವಿಸರ್ಜನೆಗೊಂಡಿತ್ತು.

ಪ್ರತಿಭಟನಾಕಾರರ ಹಿಂಸಾಚಾರದಿಂದ ಮಹಿಂದಾ ರಾಜಪಕ್ಸ ರಾಜಧಾನಿ ಕೊಲಂಬೋದಿಂದ ಓಡಿ ಹೋಗಿದ್ದು ದೇಶದ ಪೂರ್ವ ಕರಾವಳಿಯಲ್ಲಿರುವ ಟ್ರಿಂಕೋಮಲಿ ನೌಕಾನೆಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಅಧ್ಯಕ್ಷರ ಕುಟುಂಬದ ಹೊರತಾದ ಹಿರಿಯ ಶಾಸಕ ವಿಕ್ರಮಸಿಂಘೆ ಅವರ ಆಯ್ಕೆ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಲಂಕಾದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸುವ ಮತ್ತು ಅಂತರಾಷ್ಟ್ರೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಪ್ರಯತ್ನವಾಗಿ ನಡೆದಿದೆ.
Longtime lawmaker Ranil Wickremesinghe was sworn in as Sri Lanka’s new prime minister by President Gotabaya Rajapaksa who had pledged to form a new government to end political instability while defying calls to step down for his role in the crisis. His appointment came after opposition leader Sajith Premadasa had written to the president to say he is willing to lead an interim government under certain conditions.
10-03-26 11:04 am
HK News Staffer
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm