ಬ್ರೇಕಿಂಗ್ ನ್ಯೂಸ್
13-05-22 01:20 pm HK Desk News ದೇಶ - ವಿದೇಶ
ನವದೆಹಲಿ, ಮೇ 13 : 'ಮೋದಿ ಜೀ, ನೀವು ಎರಡು ಅವಧಿಗೆ ಪ್ರಧಾನಿಯಾದರೆ ಸಾಕು' ಎಂಬುದಾಗಿ ನನ್ನನ್ನು ಭೇಟಿಯಾದ ಪ್ರತಿಪಕ್ಷದ ನಾಯಕರೊಬ್ಬರು ಹೇಳಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಂಡಿದ್ದಾರೆ.
ವಿಧವೆಯರು, ವೃದ್ಧರು ಹಾಗೂ ನಿರ್ಗತಿಕ ನಾಗರಿಕರಿಗೆ ಹಣಕಾಸು ನೆರವು ನೀಡಲು ಗುಜರಾತ್ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳ ಫಲಾನುಭವಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮೋದಿ ಈ ಮಾತುಗಳನ್ನಾಡಿದ್ದಾರೆ.
ಒಂದು ದಿನ ಒಬ್ಬ ಅತಿದೊಡ್ಡ ನಾಯಕರು ನನ್ನನ್ನು ಭೇಟಿಯಾಗಿದ್ದರು. ಅವರು ರಾಜಕೀಯವಾಗಿ ನಮ್ಮನ್ನು ಸದಾ ವಿರೋಧಿಸುತ್ತಿರುವವರು. ಆದರೆ ನಾನು ಅವರನ್ನು ಗೌರವಿಸುತ್ತೇನೆ. ಅವರು ಕೆಲವು ವಿಷಯಗಳ ಬಗ್ಗೆ ಸಂತುಷ್ಟರಾಗಿರಲಿಲ್ಲ. ಹೀಗಾಗಿ ಅವರು ನನ್ನನ್ನು ಭೇಟಿಯಾಗಲು ಬಂದಿದ್ದರು ಎಂದು ಮೋದಿ ಹೇಳಿದ್ದಾರೆ.
'ಅವರು ನನ್ನ ಬಳಿ, ಮೋದಿ ಜೀ, ದೇಶವು ಎರಡು ಬಾರಿ ನಿಮ್ಮನ್ನು ಪ್ರಧಾನಿಯನ್ನಾಗಿ ಮಾಡಿದೆ. ಇದಕ್ಕಿಂತ ಹೆಚ್ಚು ನೀವೇನು ಬಯಸುತ್ತೀರಿ ಎಂದು ಕೇಳಿದ್ದರು. ಒಬ್ಬರು ಎರಡು ಬಾರಿ ಪ್ರಧಾನಿಯಾದರೆ ಎಲ್ಲವನ್ನೂ ಸಾಧಿಸಿದಂತಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿತ್ತು.
'ಆದರೆ, ಮೋದಿ ವಿಭಿನ್ನ ಗುಣಗಳಿಂದ ರೂಪಿಸಲ್ಪಟ್ಟವರು ಎಂಬುದು ಅವರಿಗೆ ತಿಳಿದಿರಲಿಲ್ಲ. ಮೋದಿಯನ್ನು ಗುಜರಾತ್ ರೂಪಿಸಿದೆ. ಹೀಗಾಗಿ ನಾನು ಯಾವುದನ್ನೂ ಹಗುರವಾಗಿ ಪರಿಗಣಿಸುವುದಿಲ್ಲ. ಏನಾಗಿದೆಯೋ ಅದೆಲ್ಲ ಆಗಿಹೋಗಿದೆ. ಈಗ ನಾನು ವಿಶ್ರಾಂತಿ ಪಡೆಯಬೇಕೇ? ಇಲ್ಲ. ಕಲ್ಯಾಣ ಯೋಜನೆಗಳ ಶೇ 100ರಷ್ಟು ಜಾರಿಯೇ ನನ್ನ ಮುಂದಿರುವ ಗುರಿ' ಎಂದು ಮೋದಿ ಹೇಳಿದ್ದಾರೆ.
ಆದರೆ ಹೀಗೆ ಹೇಳಿರುವ ಪ್ರತಿಪಕ್ಷದ ನಾಯಕ ಯಾರು ಎಂಬುದನ್ನು ಮೋದಿ ಬಹಿರಂಗಪಡಿಸಿಲ್ಲ. ಕಳೆದ ತಿಂಗಳು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ದೆಹಲಿಯಲ್ಲಿ ಮೋದಿ ಅವರನ್ನು ಭೇಟಿಯಾಗಿದ್ದರು. ಭೇಟಿ ವೇಳೆ ಕೇಂದ್ರದ ತನಿಖಾ ಸಂಸ್ಥೆಗಳು ಶಿವಸೇನಾ ಸಂಸದ ಸಂಜಯ್ ರಾವತ್ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಪ್ರಶ್ನಿಸಿದ್ದರು.
Prime Minister Narendra Modi asserted on Thursday that he has no intention of slowing down while recalling an opposition leader's observation that becoming PM twice was enough accomplishment. PM Modi was addressing via video link beneficiaries of Gujarat government's financial assistance schemes for widows, elderly and destitute citizens."One day a very big leader met me. He regularly opposes us politically, but I respect him.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm