ಬ್ರೇಕಿಂಗ್ ನ್ಯೂಸ್
13-05-22 02:49 pm HK Desk News ದೇಶ - ವಿದೇಶ
ನವದೆಹಲಿ, ಮೇ 13: ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕೆಂಬ ಕೂಗಿನ ಮಧ್ಯೆಯೇ ಮಹತ್ವದ ಬದಲಾವಣೆಗೆ ಕೇಂದ್ರ ನಾಯಕತ್ವ ಮುಂದಾಗಿದೆ ಎನ್ನುವ ಮಾಹಿತಿಗಳಿವೆ. ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕುವ ಸಲುವಾಗಿ ಒಂದು ಕುಟುಂಬ, ಒಂದೇ ಟಿಕೆಟ್ ಎನ್ನುವ ಹೊಸ ನೀತಿಯನ್ನು ಪಕ್ಷದಲ್ಲಿ ಕಡ್ಡಾಯಗೊಳಿಸಲು ನಿಯಮ ತರುವ ಬಗ್ಗೆ ಸುಳಿವು ನೀಡಲಾಗಿದೆ.
ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸುಳಿವನ್ನು ಹಿರಿಯ ನಾಯಕ ಅಜಯ್ ಮಾಕನ್ ನೀಡಿದ್ದಾರೆ. ಪಕ್ಷದಲ್ಲಿ ಕನಿಷ್ಠ ಐದು ವರ್ಷಗಳ ಕಾಲ ಕಾರ್ಯಕರ್ತನಾಗಿ ಕೆಲಸ ಮಾಡದ ಹೊರತು ನಾಯಕರ ಹತ್ತಿರದ ಸಂಬಂಧಿಗಳಿಗೆ ಟಿಕೆಟ್ ನೀಡುವಂತಿಲ್ಲ ಎಂಬ ನಿಮಯ ತರುವ ಬಗ್ಗೆ ಚಿಂತನೆ ಇದೆ. ಯಾವುದೇ ವ್ಯಕ್ತಿ ನಿರಂತರವಾಗಿ ಒಂದು ಹುದ್ದೆಯಲ್ಲಿದ್ದರೆ, ಅಂಥವರನ್ನು ಹುದ್ದೆಯಿಂದ ಇಳಿಸಲಾಗುವುದು. ಆತ ಮೂರು ವರ್ಷಗಳ ವರೆಗೆ ಹುದ್ದೆ ಇಲ್ಲದೆ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯಬೇಕು. ಆನಂತರ ಮತ್ತೆ ಹಳೆಯ ಹುದ್ದೆಗೆ ಮರಳಲು ಅವಕಾಶ ಇರುತ್ತದೆ ಎಂದು ಅಜಯ್ ಮಾಕನ್ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿರಿಸಿ ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಚಿಂತನಾ ಶಿಬಿರ ನಡೆಸಲಾಗುತ್ತಿದೆ. ರಾಷ್ಟ್ರ ಮಟ್ಟದ ನಾಯಕರು, ಚಿಂತಕರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿಯ ಧ್ರುವೀಕರಣ ರಾಜಕೀಯಕ್ಕೆ ಪ್ರತಿಯಾಗಿ ನೀತಿ ರೂಪಿಸುವ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಇದಕ್ಕಾಗಿ ಶಿಬಿರವನ್ನು ನವ್ ಸಂಕಲ್ಪ್ ಚಿಂತನ್ ಶಿಬಿರ್ ಎಂದು ಹೆಸರಿಸಲಾಗಿದೆ. ಮೇ 13ರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶಿಬಿರಕ್ಕೆ ಚಾಲನೆ ನೀಡಿ, ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಶಿಬಿರದಲ್ಲಿ ಮಹತ್ವದ ಆರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ರಾಜಕೀಯ, ಸಂಘಟನೆ, ಆರ್ಥಿಕ ನೀತಿ, ಕೃಷಿ, ಯುವ ಜನಾಂಗ ಮತ್ತು ಸಾಮಾಜಿಕ ಕಲ್ಯಾಣ ಈ ವಿಚಾರಗಳ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ.
Senior Congress leader Ajay Maken said there would be big organisational changes in the party after the three-day brainstorming session - Chintan Shivir, which will be held in Rajashthan's Udhaipur.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm