ಬ್ರೇಕಿಂಗ್ ನ್ಯೂಸ್
14-05-22 09:51 pm HK Desk News ದೇಶ - ವಿದೇಶ
ನವದೆಹಲಿ, ಮೇ 14: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಹಾರ ಧಾನ್ಯ ವಸ್ತುಗಳಿಗೆ ಬೇಡಿಕೆ ಹೆಚ್ಚಿರುವುದು ಮತ್ತು ನೆರೆ ರಾಷ್ಟ್ರಗಳಲ್ಲಿ ಆಹಾರ ವಸ್ತುಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ದಿಢೀರ್ ಆಗಿ ಭಾರತ ಸರಕಾರ ಗೋಧಿ ರಫ್ತುನ್ನು ನಿಷೇಧಿಸಿದೆ.
ದೇಶೀಯ ಮಾರುಕಟ್ಟೆಯಲ್ಲಿ ಆಹಾರ ಸಾಮಗ್ರಿಗಳ ಬೆಲೆ ಹೆಚ್ಚಿರುವುದು ಮತ್ತು ನೆರೆಯ ಸಣ್ಣ ಪುಟ್ಟ ರಾಷ್ಟ್ರಗಳಲ್ಲಿ ಆಹಾರ ಪದಾರ್ಥಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ದರದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದ್ದರಿಂದ ಭಾರತ ಸರಕಾರ ಈ ಕ್ರಮ ಕೈಗೊಂಡಿದೆ. ಅಲ್ಲದೆ, ಆಹಾರ ಭದ್ರತಾ ಕ್ರಮಗಳಿಗಾಗಿ ಗೋಧಿ ರಫ್ತು ಮಾಡುವುದನ್ನ ಬ್ಯಾನ್ ಮಾಡುತ್ತಿರುವುದಾಗಿ ವಾಣಿಜ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಹೀಗಿದ್ದರೂ, ನೆರೆ ದೇಶಗಳಲ್ಲಿ ತೀವ್ರ ಆಹಾರ ಕೊರತೆ ಎದುರಿಸುತ್ತಿರುವ ರಾಷ್ಟ್ರಗಳಿಗೆ ಭಾರತ ಸರಕಾರದ ಒಪ್ಪಿಗೆ ಮೇರೆಗೆ ಗೋಧಿ ರಫ್ತು ಮಾಡಲು ಬದ್ಧತೆ ಹೊಂದಿದೆ ಎಂದು ಹೇಳಿದೆ. ಗೋಧಿ ಮತ್ತು ಅದರ ಉಪ ಉತ್ಪನ್ನಗಳ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಏರಿಕೆಯಾಗಿದ್ದು, ಇದರಿಂದಾಗಿ ಪ್ರಗತಿಶೀಲ ದೇಶಗಳು ತೀವ್ರ ತೊಂದರೆಗೆ ಸಿಲುಕಿವೆ. ಈ ಸಂದರ್ಭದಲ್ಲಿ ಬಹು ರಾಷ್ಟ್ರೀಯ ಕಂಪನಿಗಳು ಗೋಧಿಯನ್ನು ಹಿಡಿದಿಟ್ಟು ಮತ್ತಷ್ಟು ದರ ಏರಿಕೆಗೆ ಕಾರಣವಾಗುತ್ತಿವೆ ಎನ್ನಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಏರಿಳಿತ ಮತ್ತು ಭಾರತದಲ್ಲಿ ಆಹಾರ ಭದ್ರತೆ ಉಳಿಸಿಕೊಳ್ಳುವ ಉಪಕ್ರಮದ ಉದ್ದೇಶದಲ್ಲಿ ಗೋಧಿ ರಫ್ತು ನಡೆಸುವುದಕ್ಕೆ ನಿಷೇಧ ವಿಧಿಸಲಾಗಿದೆ ಎನ್ನಲಾಗುತ್ತಿದೆ.
ಭಾರತ 2022-23ರ ಅವಧಿಯಲ್ಲಿ ಹತ್ತು ಮಿಲಿಯನ್ ಟನ್ ಗೋಧಿಯನ್ನು ರಫ್ತು ಮಾಡಲು ಗುರಿ ಇರಿಸಿಕೊಂಡಿದೆ. ಅಲ್ಲದೆ, ಎರಡು ದಿನಗಳ ಹಿಂದೆ ವ್ಯಾಪಾರ ಉದ್ದೇಶಕ್ಕಾಗಿ ಇಂಡೋನೇಶ್ಯಾ, ಟ್ಯುನಿಷಿಯಾ ಮತ್ತಿತರ ಪ್ರಗತಿ ಶೀಲ ದೇಶಗಳಿಗೆ ಭಾರತದಿಂದ ಪ್ರತಿನಿಧಿಗಳನ್ನು ಕಳಿಸಿಕೊಡುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಗೋಧಿ ರಫ್ತನ್ನು ನಿಷೇಧ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲಿ ಗೋಧಿ ದಾಸ್ತಾನು ಬಹಳಷ್ಟು ಇದ್ದರೂ, ಗೋಧಿ ಹುಡಿಗೆ 2010ರ ಬಳಿಕ ಇದೇ ಮೊದಲ ಬಾರಿಗೆ ದೇಸಿ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ದರ ಆಗಿದೆ. ಎಪ್ರಿಲ್ ತಿಂಗಳಲ್ಲಿ ಗೋಧಿ ಅಟ್ಟಾ ಬೆಲೆ ಗರಿಷ್ಠ ಹಂತಕ್ಕೆ ತಲುಪಿತ್ತು.
India said it would ban wheat exports, in a move that will add to global inflationary pressure and further strain global food supplies that have been disrupted by the war in Ukraine. “The food security of India, neighboring and other vulnerable countries is at risk,” India’s Directorate General of Foreign Trade said in a notice on Friday explaining the ban.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm