ಬ್ರೇಕಿಂಗ್ ನ್ಯೂಸ್
26-09-20 01:11 pm Headline Karnataka News Network ದೇಶ - ವಿದೇಶ
ಕೀವ್, ಸೆಪ್ಟಂಬರ್ 26: ಉಕ್ರೇನ್ ವಾಯುಪಡೆಯ ವಿಮಾನ, ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಪತನಗೊಂಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.
"ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ" ಎಂದು ರಕ್ಷಣಾ ಖಾತೆ ಉಪಸಚಿವ ಅಂಟೋನ್ ಜೆರೆಶ್ನೆಕೋವ್ ಪ್ರಕಟಿಸಿದ್ದಾರೆ. ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ. ಈ ಸಾರಿಗೆ ವಿಮಾನ 28 ಪ್ರಯಾಣಿಕರನ್ನು ಒಯ್ಯುತ್ತಿತ್ತು ಎನ್ನಲಾಗಿದ್ದು, ಇವರಲ್ಲಿ 21 ಮಂದಿ ಸೇನಾ ವಿದ್ಯಾರ್ಥಿಗಳು ಹಾಗೂ ಏಳು ಮಂದಿ ತಂತ್ರಜ್ಞರು.


"ಇದು ಆಘಾತಕಾರಿ ಘಟನೆ. ಅಪಘಾತಕ್ಕೆ ನಿಖರ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ" ಘಟನಾ ಸ್ಥಳಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಕ್ಸಿ ಶನಿವಾರ ಭೇಟಿ ನೀಡಲಿದ್ದಾರೆ. ಈ ದುರಂತದ ಕಾರಣ ಪತ್ತೆ ಮಾಡಲು ತನಿಖಾ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಟನೋವ್-26 ಸಾರಿಗೆ ವಿಮಾನ, ಚುಯೀವ್ ಸೇನಾ ನೆಲೆಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 8.50ಕ್ಕೆ ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು, ಒಂದು ಗಂಟೆ ಕಾಲ ಉರಿಯುತ್ತಿತ್ತು ಎಂದು ಹೇಳಲಾಗಿದೆ.
Join our WhatsApp group for latest news updates (2)
video
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm