ಬ್ರೇಕಿಂಗ್ ನ್ಯೂಸ್
26-09-20 01:11 pm Headline Karnataka News Network ದೇಶ - ವಿದೇಶ
ಕೀವ್, ಸೆಪ್ಟಂಬರ್ 26: ಉಕ್ರೇನ್ ವಾಯುಪಡೆಯ ವಿಮಾನ, ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಪತನಗೊಂಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.
"ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ" ಎಂದು ರಕ್ಷಣಾ ಖಾತೆ ಉಪಸಚಿವ ಅಂಟೋನ್ ಜೆರೆಶ್ನೆಕೋವ್ ಪ್ರಕಟಿಸಿದ್ದಾರೆ. ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ. ಈ ಸಾರಿಗೆ ವಿಮಾನ 28 ಪ್ರಯಾಣಿಕರನ್ನು ಒಯ್ಯುತ್ತಿತ್ತು ಎನ್ನಲಾಗಿದ್ದು, ಇವರಲ್ಲಿ 21 ಮಂದಿ ಸೇನಾ ವಿದ್ಯಾರ್ಥಿಗಳು ಹಾಗೂ ಏಳು ಮಂದಿ ತಂತ್ರಜ್ಞರು.
"ಇದು ಆಘಾತಕಾರಿ ಘಟನೆ. ಅಪಘಾತಕ್ಕೆ ನಿಖರ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ" ಘಟನಾ ಸ್ಥಳಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಕ್ಸಿ ಶನಿವಾರ ಭೇಟಿ ನೀಡಲಿದ್ದಾರೆ. ಈ ದುರಂತದ ಕಾರಣ ಪತ್ತೆ ಮಾಡಲು ತನಿಖಾ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಟನೋವ್-26 ಸಾರಿಗೆ ವಿಮಾನ, ಚುಯೀವ್ ಸೇನಾ ನೆಲೆಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 8.50ಕ್ಕೆ ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು, ಒಂದು ಗಂಟೆ ಕಾಲ ಉರಿಯುತ್ತಿತ್ತು ಎಂದು ಹೇಳಲಾಗಿದೆ.
Join our WhatsApp group for latest news updates (2)
video
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm