ಬ್ರೇಕಿಂಗ್ ನ್ಯೂಸ್
19-05-22 01:14 pm HK Desk News ದೇಶ - ವಿದೇಶ
ಗುವಾಹಟಿ, ಮೇ 19: ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮ ಅಸ್ಸಾಂನಲ್ಲಿ ಮುಂಗಾರು ಆರಂಭದಲ್ಲೇ ರಣಭೀಕರ ಮಳೆಯಾಗಿದ್ದು 26 ಜಿಲ್ಲೆಗಳ ವ್ಯಾಪ್ತಿಯಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. 1089 ಗ್ರಾಮಗಳಲ್ಲಿ ನೆರೆಪೀಡಿತವಾಗಿದ್ದು, ಎರಡು ದಿನಗಳ ಮಳೆಯಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಗಳಿವೆ.
ಅಸ್ಸಾಮ್ ರಾಜ್ಯದ 20 ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ಯಾರಾ ಮಿಲಿಟರಿ, ಭೂಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು ಪ್ರವಾಹದ ಮಧ್ಯೆ ಸಿಕ್ಕಿಬಿದ್ದವರನ್ನು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. 20 ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಪ್ರವಾಹ ಮತ್ತು ಭೂಕುಸಿತದಿಂದಾಗಿ ತೊಂದರೆಗೆ ಸಿಲುಕಿದ್ದಾರೆ.
ಆಯಾ ಜಿಲ್ಲಾಡಳಿತಗಳಿಂದ ನಿರಾಶ್ರಿತರಿಗಾಗಿ 145 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರವಾಹದ ಸ್ಥಳಗಳಿಂದ ಜನರು ತಾವಾಗಿಯೇ ಈಜಿಕೊಂಡು ರಸ್ತೆಯಲ್ಲಿ ಬರುತ್ತಿದ್ದಾರೆ. ಗುವಾಹಟಿ ಭಾಗದ ಹವಾಮಾನ ಘಟಕವು ಇನ್ನೂ ಕೆಲವು ದಿನಗಳ ವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕಾಚಾರ್ ಜಿಲ್ಲೆ ಹೆಚ್ಚು ತೊಂದರೆಗೀಡಾಗಿದ್ದು, ಅಲ್ಲಿನ ಪ್ರವಾಹ ಮತ್ತು ತೀವ್ರ ಭೂಕುಸಿತ ಉಂಟಾಗಿದೆ. ಉಳಿದಂತೆ ಹೋಜಾಯ್, ನಾಗಾಂವ್, ದಾರಾಂಗ್, ಬಿಸ್ವನಾಥ್ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು ನೂರಾರು ಹಳ್ಳಿಗಳಲ್ಲಿ ತಗ್ಗು ಪ್ರದೇಶಗಳು ನೀರಿನಿಂದ ಆವರಿಸಿವೆ. ಕೊಪ್ಲಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಆಸುಪಾಸಿನ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಕಾಜೀರಂಗ ನ್ಯಾಶನಲ್ ಪಾರ್ಕ್ ಗೂ ನೀರು ನುಗ್ಗಿದ್ದು ಅಲ್ಲಿರುವ ಪ್ರಾಣಿಗಳು, ಆನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗುತ್ತಿದೆ.
#Landslide in between Potin and Possa, Itanagar-Ziro road while debris were being cleared on Monday morning. pic.twitter.com/6McpXQKywn
— The Arunachal Times (@arunachaltimes_) May 16, 2022
The flood situation in Assam worsened on Wednesday, with one more person killed in Darrang district, bringing the total number of people killed in the current pre-monsoon floods and landslides in Assam to nine, according to officials. More than 6.62 lakh people have been affected in 27 of the state's 34 districts.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm