ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.

ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm