ಬ್ರೇಕಿಂಗ್ ನ್ಯೂಸ್
17-09-20 02:01 pm Headline Karnataka News Network ನ್ಯೂಸ್ View
ಬೆಂಗಳೂರು, ಸೆಪ್ಟಂಬರ್ 17: ಈ ರಮೇಶ್ ಜಾರಕಿಹೊಳಿ ಗೊತ್ತಲ್ಲ.. ಕುಮಾರಸ್ವಾಮಿ ಸರಕಾರವನ್ನು ತನ್ನ ಕಿರು ಬೆರಳಿನಲ್ಲೇ ಬುಗುರಿಯಂತೆ ತಿರುಗಿಸಿ ಮೂಲೆಗೆ ತಳ್ಳಿದ ಬೆಳಗಾವಿ ಬ್ರದರ್..! ಕುಮಾರಣ್ಣ ಸರಕಾರವನ್ನು ಹಿಂಬಾಗಿಲಿಂದ ಹುಳಿ ಹಿಂಡಿಯೇ ಪತನಗೊಳಿಸಿದ್ದಕ್ಕಾಗಿ ಜಾರಕಿ 'ಹುಳಿ' ಅಂತ್ಲೇ ಮಾಧ್ಯಮದಲ್ಲಿ ಹೆಸರಾದವರು. ಎಷ್ಟಾದ್ರೂ ಈ ಬೆಳಗಾವಿ ರಾಜಕಾರಣಿ ಹಾಗೇ ಕುಂತ್ಕೊಳ್ಳೋ ಮನುಷ್ಯ ಅಲ್ಲ.. ಯಾರಿಗಾದ್ರೂ ಹುಳಿ ಹಿಂಡೋದೇ ಜಾಯಮಾನ ಅನ್ನೋದು ಅವ್ರ ರಾಜಕೀಯ ನಡೆಗಳಿಂದಲೇ ತೋರಿಸಿಕೊಟ್ಟಿದ್ದಾರೆ. ಈಗ ಈ ಜಾರಕಿಹೊಳಿಯನ್ನು ಹಿಡಿದು ಬಿಜೆಪಿ ಹೈಕಮಾಂಡ್ ಮಹಾರಾಷ್ಟ್ರದಲ್ಲಿ ಹಕೀಮತ್ ಮಾಡೋಕೆ ಕಳಿಸ್ತಿದ್ಯಾ ಅನ್ನೋ ಅನುಮಾನ ಕೇಳಿಬಂದಿದೆ. ಇದ್ಕೆ ಕಾರಣ ಆಗಿರೋದು ಜಾರಕಿಹೊಳಿ ದೆಹಲಿಯಲ್ಲಿ ಬಿಜೆಪಿಯ ಮಾಜಿ ಸಿಎಂ ಫಡ್ನವೀಸ್ ಭೇಟಿ ಮಾಡಿದ್ದು.
ಮಹಾರಾಷ್ಟ್ರದಲ್ಲಿ ಬಿಜೆಪಿಯ ಮೈತ್ರಿಯನ್ನು ಕಡಿದುಕೊಂಡು ಕಾಂಗ್ರೆಸ್, ಎನ್ ಸಿಪಿ ಜೊತೆಯಾಗಿ ಅಧಿಕಾರ ನಡೆಸ್ತಿರೋ ಶಿವಸೇನೆ ಸರಕಾರಕ್ಕೆ ಜಾರಕಿಹೊಳಿ ಹುಳಿ ಹಿಂಡಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ಬೆಳಗಾವಿಯಲ್ಲಿ ಪ್ರಭಾವಿಯಾಗಿರುವ ಜಾರಕಿಹೊಳಿ ಬ್ರದರ್ಸ್ ಮಹಾರಾಷ್ಟ್ರ ಭಾಗದಲ್ಲೂ ಪ್ರಭಾವ ಹೊಂದಿದ್ದಾರೆ. ಮೇಲಾಗಿ ಗಡಿಭಾಗದ ಶಾಸಕರು ಪಕ್ಷಭೇದ ಇಲ್ಲದೆ ಬೆಳಗಾವಿಯ ಪ್ರಭಾವಿಗಳ ಜೊತೆ ಹತ್ತಿರದ ನಂಟು ಹೊಂದಿದ್ದಾರೆ. ಇಂಥ ವ್ಯಕ್ತಿ ಈಗ ಮಹಾರಾಷ್ಟ್ರದಲ್ಲಿ ಕಳೆದ ಬಾರಿ ಸಿಎಂ ಆಗಿದ್ದ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೂಚನೆ ಮೇರೆಗೆ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಈ ಭೇಟಿ ಮಾಡಿದ್ದಾರೆ ಎನ್ನಲಾಗ್ತಿದೆ. ಒಂದು ಗಂಟೆಗೂ ಹೆಚ್ಚು ಕಾಲ ಇವರಿಬ್ಬರು ಮಾತುಕತೆ ನಡೆಸಿದ್ದು ಈಗ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಕುಮಾರಸ್ವಾಮಿ ಸರಕಾರ ಪತನಗೊಳಿಸಿದ ಸಂದರ್ಭ ರಮೇಶ್ ಜಾರಕಿಹೊಳಿ ಮತ್ತು ಎಚ್.ವಿಶ್ವನಾಥ್ ಗ್ಯಾಂಗ್ ಮುಂಬೈನ ಹೊಟೇಲಲ್ಲಿ ಉಳಿದುಕೊಂಡಿತ್ತು. ಹೇಗಾದ್ರೂ ಸರಕಾರ ಉಳಿಸಿಕೊಳ್ಳಬೇಕೆಂದು ಡಿಕೆಶಿ ಅಂಡ್ ಗ್ಯಾಂಗ್ ಜಾರಕಿಹೊಳಿ ಭೇಟಿಗಾಗಿ ಮುಂಬೈಗೆ ತೆರಳಿದ್ದರು. ಆದರೆ ಆಗ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ, ಡಿಕೆ ಶಿವಕುಮಾರ್ ಗೆ ಜಾರಕಿಹೊಳಿ ಉಳಿದುಕೊಂಡಿದ್ದ ಹೊಟೇಲಿಗೆ ತೆರಳಲು ಅವಕಾಶ ನೀಡಿರಲಿಲ್ಲ. ಕೊನೆಗೆ ಡಿಕೆಶಿ ಅಂಡ್ ಟೀಮ್ ಮುಂಬೈನಲ್ಲಿ ಹೈಡ್ರಾಮಾ ಮಾಡಿ, ಏನೂ ಮಾಡಲಾಗದೆ ಹಿಂತಿರುಗಿತ್ತು. ಇತ್ತ ಕರ್ನಾಟಕದಲ್ಲಿ ಬಿಜೆಪಿ ಸರಕಾರ ಬರಲು ರಮೇಶ್ ಜಾರಕಿಹೊಳಿ ಕಾರಣ ಆಗಿದ್ದೂ ಅವರ ಛಾರ್ಮ್ ಹೆಚ್ಚುವಂತೆ ಮಾಡಿತ್ತು. ಆವತ್ತು ಸಿಎಂ ಫಡ್ನವಿಸ್ ಕಾರಣದಿಂದ ಮುಂಬೈನಲ್ಲಿ ಅತೃಪ್ತರನ್ನು ಕಟ್ಟಿಕೊಂಡು 15 ದಿನಗಳ ಕಾಲ ಉಳಿದುಕೊಂಡಿದ್ದ ಜಾರಕಿಹೊಳಿ ಈಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಲಿದ್ದಾರೆಯೇ ಅನ್ನುವ ಮಾತು ಕೇಳಿಬಂದಿದೆ. ಜಾರಕಿಹೊಳಿ ಮತ್ತು ಫಡ್ನವಿಸ್ ನಡುವಿನ ಭೇಟಿ ಕುತೂಹಲಕ್ಕೆ ಕಾರಣವಾಗಿದ್ದಲ್ಲದೆ, ಅತ್ತ ಶಿವಸೇನೆ - ಕಾಂಗ್ರೆಸ್ ಸರಕಾರದಲ್ಲಿ ನಡುಕ ಸೃಷ್ಟಿಸಿದೆ.
ನಟ ಸುಶಾಂತ್ ಸಾವಿನ ಪ್ರಕರಣದಲ್ಲಿ ಹೆಸರು ಕೆಡಿಸಿಕೊಂಡಿರುವ ಶಿವಸೇನೆ ಸರಕಾರದ ಬಗ್ಗೆ ಅಲ್ಲಿನ ಶಾಸಕರು ಅತೃಪ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಇದೇ ಸಮಯವನ್ನು ಬಿಜೆಪಿ ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದು ಚತುರ ರಾಜಕೀಯ ನಡೆ ಎನ್ನುವ ಮಾತು ಕೇಳಿಬರುತ್ತಿದೆ.
Join our WhatsApp group for latest news updates
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm