ಬ್ರೇಕಿಂಗ್ ನ್ಯೂಸ್
09-08-22 02:54 pm Source: Vijayakarnataka ಸಿನಿಮಾ
ಕನ್ನಡದಲ್ಲಿ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು ಬರುತ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ( The Endless One Bhagavan Nityananda ) ಎಂಬ ಹೆಸರಿನ ಹೊಸ ಸಿನಿಮಾವೊಂದು ಬರುತ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ( Vinay Guruji ) ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ವಿನಯ್ ಗುರೂಜಿ ಸಿನಿಮಾ ಬಗ್ಗೆ ಹೇಳಿದ್ದೇನು?

ವಿನಯ್ ಗುರೂಜಿ ಮಾತನಾಡಿ, "ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್ನಲ್ಲಿ ಒಂದೇ ತತ್ವ- ಮನುಷ್ಯತ್ವ. ಅಲ್ಲಿ ಮತಕ್ಕೆ ಜಾಗವಿಲ್ಲ. ಮನುಷ್ಯತ್ವಕ್ಕಿಂತ ದೊಡ್ಡ ತತ್ವ ಮತ್ತೊಂದಿಲ್ಲ. ಶಿರಡಿಬಾಬಾ ಸೀರಿಯಲ್ ಬಂದಮೇಲೆ ಬಾಬಾ ಬಗ್ಗೆ ಗೊತ್ತಾಗಿದ್ದು, ಶ್ರೀನಿವಾಸ ಕಲ್ಯಾಣ ಸಿನಿಮಾ ಆದ್ಮೇಲೆ ತಿರುಪತಿ ಬಗ್ಗೆ ಗೊತ್ತಾಯ್ತು. ಅದೇ ರೀತಿ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದಲ್ಲಿ ಹಲವು ವಿಷಯಗಳನ್ನು ಜನರಿಗೆ ತಲುಪಿಸುವ ಕೆಲಸವಾಗಿದೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಿರ್ಮಾಪಕ ಕೃಷ್ಣ ಕೆ ಆರ್ ಹೇಳಿದ್ದೇನು?

ನಿರ್ಮಾಪಕ ಕೃಷ್ಣ ಕೆ.ಆರ್ ಮಾತನಾಡಿ, "ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದು, ನಮ್ಮ ಫ್ಯಾಮಿಲಿ ಭಗವಾನ್ ನಿತ್ಯಾನಂದ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದೇವೆ. ಈ ಸಿನಿಮಾ ಮಾಡುವ ಮೂಲಕ ಚಿಕ್ಕದೊಂದು ಅಳಿಲು ಸೇವೆ ಮಾಡುತ್ತಿದ್ದೇವೆ" ಎಂದರು.
ಸಿನಿಮಾ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ
ಸಿನಿಮಾಗೆ The endless one ಭಗವಾನ್ ಶ್ರೀ ನಿತ್ಯಾನಂದ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದ್ದು, ಲಕ್ಷ್ಮಸ್ ಸ ಖೋಡೇ ಅವರ ಮರಿ ಮಗ, ಪದ್ಮಾನಾಭ ಸ ಖೋಡೇ ಅವರ ಮೊಮ್ಮಗ ಶ್ರೀಕೃಷ್ಣ ಕೆ ಆರ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಗುಲಾಬ್ ಪ್ರೊಡಕ್ಷನ್ ನಡಿಯಲ್ಲಿ ತಯಾರಾಗ್ತಿರುವ ಚೊಚ್ಚಲ ಸಿನಿಮಾ ಇದಾಗಿದ್ದು, ಅದ್ದೂರಿಯಾಗಿ ಚಿತ್ರ ನಿರ್ಮಾಣ ನಿರ್ಮಾಪಕ ಕೃಷ್ಣ ಸಜ್ಜಾಗಿದ್ದು, ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ಮೂಡಿಬರಲಿದೆ. ಸದ್ಯದಲ್ಲಿಯೇ ಉಳಿದ ಸ್ಟಾರ್ ಕಾಸ್ಟ್, ತಂತ್ರಜ್ಞಾನರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.
ಮನುಷ್ಯತ್ವ-ಪ್ರೀತಿ ಬೋಧಿಸದ ಧರ್ಮ ಗ್ರಂಥಗಳಿಲ್ಲ! ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಖಂಡಿಸಿದ ವಿನಯ್ ಗುರೂಜಿ.
Vinay Guruji Support The Endless One Bhagavan Nityananda Movie.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm