ಬ್ರೇಕಿಂಗ್ ನ್ಯೂಸ್
15-08-22 03:50 pm Source: Vijayakarnataka ಸಿನಿಮಾ
'ರಾಷ್ಟ್ರ ಪ್ರಶಸ್ತಿ' ಪುರಸ್ಕೃತ ನಿರ್ದೇಶಕ ಮಂಸೋರೆ ( Mansore ) ವಿಭಿನ್ನ ಸಿನಿಮಾಗಳನ್ನು ಚಿತ್ರಪ್ರೇಮಿಗಳ ಮಡಿಲಿಗೆ ಹಾಕುತ್ತಾ ಬರುತ್ತಿದ್ದಾರೆ. 'ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್-1978’ ಚಿತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಅವರು, ಸದ್ಯ ‘19.20.21’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಚಿತ್ರತಂಡ ವಿಶೇಷವಾದ ಪೋಸ್ಟರ್ವೊಂದನ್ನು ಬಿಡುಗಡೆ ಮಾಡಿದೆ. ಬಾಯಿಗೆ ಬಟ್ಟೆ ಕಟ್ಟಿರುವ ವ್ಯಕ್ತಿ, ಆತನ ಬೆನ್ನು, ಬಾಯಲ್ಲಿ ರಕ್ತದ ಕಲೆ ಇರುವ ಕೌತುಕ ಮೂಡಿಸುವ ಒಂದು ಪೋಸ್ಟರ್ ಅನ್ನು ಮಂಸೋರೆ ಬಳಗ ಅನಾವರಣ ಮಾಡಿದೆ.
'ಜೈ ಭೀಮ್', 'ಜನಗಣಮನ' ಸಿನಿಮಾಗಳ ಮಾದರಿಯಲ್ಲಿ ‘19.20.21’ ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಬಾಲಾಜಿ ಮನೋಹರ್, ಎಂಡಿ ಪಲ್ಲವಿ, ಶೃಂಗ, ಸಂಪತ್ ಮೈತ್ರೇಯ, ಅವಿನಾಶ್, ಕೃಷ್ಣ ಹೆಬ್ಬಾಲೆ ಮುಂತಾದ ತಾರಾಬಳಗ ಚಿತ್ರದಲ್ಲಿದೆ.
'ಆ್ಯಕ್ಟ್-1978’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ದೇವರಾಜ್ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದು , ಬಿಂದುಮಾಲಿನಿ ಸಂಗೀತ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಶಿವು ಬಿಕೆ ಕುಮಾರ್ ಕ್ಯಾಮೆರಾ, ಸುರೇಶ್ ಆರುಮುಗಂ ಸಂಕಲನವಿದೆ.

ಚಿತ್ರಕಥೆಯಲ್ಲಿ ಮಂಸೋರೆ ಜೊತೆಗೆ ವೀರೇಂದ್ರ ಮಲ್ಲಣ್ಣ ಲೇಖನಿ ಹಂಚಿಕೊಂಡಿದ್ದರೆ, ಸಂಭಾಷಣೆಗಳ ಬರವಣಿಗೆಯಲ್ಲಿ ಅವಿನಾಶ್ ಜಿ ಮತ್ತು ವೀರೇಂದ್ರ ಮಲ್ಲಣ್ಣ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ತಂಡ, ಈಗ ಸಂಕಲನ ಮುಗಿಸಿ ಮುಂದಿನ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿದ್ದಾರೆ.
![]()
ಅಂದಹಾಗೆ ಇದು ಮಂಸೋರೆ ಅವರ 4ನೇ ಸಿನಿಮಾ. ಈ ಬಗ್ಗೆ ಹಿಂದೆ ಮಾತನಾಡಿದ್ದ ಮಂಸೋರೆ ಅವರು, "ಇದು ಹೊಸ ಸಿನಿಮಾ, ಹೊಸ ಪ್ರಯತ್ನವೊಂದರ ಬೆನ್ನತ್ತಿ ಹೊರಟಿದ್ದೇವೆ. ಆದರೆ ಇದು ಕನಸಲ್ಲ, ಕತೆಯಲ್ಲ, ಸತ್ಯ ಘಟನೆ ಆಧಾರಿತವಾದುದು. ಬಹಳ ಹಿಂದೆಯೇ ಸಿನಿಮಾ ಮಾಡಬೇಕು ಅಂದುಕೊಂಡಿದ್ದ ಒಂದು ಘಟನೆಯು ದೃಶ್ಯರೂಪ ಪಡೆದುಕೊಳ್ಳಲು ಈಗ ಕಾಲ ಕೂಡಿಬಂದಿದೆ. ಹತ್ತೊಂಬತ್ತು, ಇಪ್ಪತ್ತು, ಇಪ್ಪತ್ತೊಂದು..." ಎಲ್ಲರ ಬದುಕಿಗೆ ಬಹಳ ಮುಖ್ಯವಾದ ಸಂಖ್ಯೆಗಳು.. ಅದು ಏನು? ಹೇಗೆ? ಎಂಬುವ ಪ್ರಶ್ನೆಗಳಿಗೆ ಉತ್ತರ ಈ ಚಿತ್ರದಲ್ಲಿದೆ" ಎಂದಿದ್ದಾರೆ.
National Award Winner Director Mansore Release 19 20 21 Movie Poster.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm