ಬ್ರೇಕಿಂಗ್ ನ್ಯೂಸ್
05-09-22 01:34 pm Source: Vijayakarnataka ಸಿನಿಮಾ
ಕನ್ನಡ ಸಿನಿಮಾಗಳಿಗೆ ಇತ್ತೀಚೆಗೆ ಪರಭಾಷೆಗಳಲ್ಲಿ ಬೇಡಿಕೆ ಸೃಷ್ಟಿಯಾಗುತ್ತಿವೆ. ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಲವ್ 360’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಈಗ ಈ ಸಿನಿಮಾ ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗುತ್ತಿದೆ ಎಂದು ಸುದ್ದಿಯಾಗಿದೆ.
ಶಶಾಂಕ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಹೊಸತನದ ಕಥೆಯಿಂದ ಗಮನ ಸೆಳೆದಿತ್ತು. ಈ ಸಿನಿಮಾ ಮೂಲಕ ಪ್ರವೀಣ್ ಎಂಬ ಯುವಕ ನಾಯಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಸಿನಿಮಾವನ್ನು ಈಗ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮತ್ತು ನಿರ್ಮಾಪಕರು ರಿಮೇಕ್ ಮಾಡಲು ಆಸಕ್ತಿ ತೋರಿಸಿದ್ದಾರೆ. ಶಶಾಂಕ್ ಅವರಿಗೆ ನಿರ್ದೇಶನ ಮಾಡಲು ಆಫರ್ ಸಹ ನೀಡಿದ್ದಾರಂತೆ.

‘ಲವ್ 360 ಸಿನಿಮಾದ ಕಥೆ ಮತ್ತು ಮೇಕಿಂಗ್ ಅನ್ನು ಇಷ್ಟಪಟ್ಟು ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ರಿಮೇಕ್ ಮಾಡಲು ಮುಂದೆ ಬಂದಿದೆ. ತಮಿಳಿಗೂ ಸಹ ಒಂದಷ್ಟು ಮಂದಿ ಕೇಳಿದ್ದಾರೆ. ಸದ್ಯದಲ್ಲೇ ಎಲ್ಲವೂ ಫೈನಲ್ ಆಗಲಿದೆ’ಎಂದು ಹೇಳುತ್ತಾರೆ ಶಶಾಂಕ್.

ಜನ ಗೆಲ್ಲಿಸಿದ ಸಿನಿಮಾ ಈ ಸಿನಿಮಾ ಬಿಡುಗಡೆಯಾಗಿ ಮೊದಲ ಮೂರು ದಿನಗಳ ಕಾಲ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಲಿಲ್ಲ ಎಂದು ಶಶಾಂಕ್ ಬೇಸರದಿಂದ ವಿಡಿಯೊವೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದರು. ಆ ವಿಡಿಯೊ ವೈರಲ್ ಆಗಿ ಸಿನಿಮಾಗೆ ಜನ ಬರಲಾರಂಭಿಸಿದರು. ವಿಶೇಷ ಎಂದರೆ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದ್ದಲ್ಲದೆ, ಜನಮನವನ್ನು ಸಹ ಗೆದ್ದಿತು. ಹಾಗಾಗಿ ಶಶಾಂಕ್ ಕನ್ನಡಿಗರಿಗೆ ಧನ್ಯವಾದ ಹೇಳಿ ಒಂದು ವಿಡಿಯೊವನ್ನು ಹರಿ ಬಿಟ್ಟಿದ್ದಾರೆ.

‘ಕನ್ನಡಿಗರು ಸಿನಿಮಾವನ್ನು ಗೆಲ್ಲಿಸಿದ್ದಾರೆ. ಒಳ್ಳೆಯ ಕಂಟೆಂಟ್ ಇರುವ ಸಿನಿಮಾಗಳನ್ನು ಮಾಡಿದರೆ ಎಂದಿಗೂ ಅವರು ಕೈ ಬಿಡುವುದಿಲ್ಲ ಎಂಬುದನ್ನು ನಿರೂಪಿಸಿದ್ದಾರೆ. ‘ಲವ್ 360’ ತಂಡದಿಂದ ಸಿನಿಮಾ ನೋಡಿದ ಎಲ್ಲರಿಗೂ ಧನ್ಯವಾದ. ಈ ಸಿನಿಮಾ ಹಿಟ್ ಆಗಲು ಹಲವು ಕಾರಣಗಳಿವೆ. ಸಿನಿಮಾದಲ್ಲಿನ ಹಾಡುಗಳು ಮತ್ತು ನನ್ನ ಕಥಾ ನಾಯಕ ಪ್ರವೀಣ್ ಮತ್ತು ನಾಯಕಿ ರಚನಾ ಇಂದರ್ ಅವರ ನಟನೆಯೂ ಕಾರಣ’ ಎಂದು ಹೇಳಿದ್ದಾರೆ ಶಶಾಂಕ್.ಒಟ್ಟಾರೆ ಕನ್ನಡಿಗರು ಇಷ್ಟಪಟ್ಟ ಸಿನಿಮಾಗಳು ಪರಭಾಷೆಗೂ ಹೋಗುತ್ತಿರುವುದು ಸಹಜವಾಗಿ ಕನ್ನಡ ಸಿನಿಮಾ ಪ್ರೇಮಿಗಳಿಗೆ ಸಂತಸವಾಗಿದೆ.
"ರಿಮೇಕ್ಗಾಗಿ ಬೇಡಿಕೆ ಬಂದಿದೆ. ಸದ್ಯದಲ್ಲೇ ಯಾರು ಮಾಡುತ್ತಾರೆ ಎಂಬ ಬಗ್ಗೆ ವಿವರ ನೀಡುತ್ತೇವೆ" ಎಂದಿದ್ದಾರೆ ನಿರ್ದೇಶಕ ಶಶಾಂಕ್
Demand For Director Shashank Love 360 Movie Remake
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm