ಬ್ರೇಕಿಂಗ್ ನ್ಯೂಸ್
12-09-22 02:28 pm Source: Vijayakarnataka ಸಿನಿಮಾ
'ಸೂಪರ್ ಸ್ಟಾರ್' ರಜನಿಕಾಂತ್ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೌಂದರ್ಯಾ ಅವರಿಗೆ ಈಗಾಗಲೇ ವೇದ್ ಎಂಬ ಗಂಡು ಮಗನಿದ್ದಾನೆ. ಇದೀಗ ಎರಡನೇ ಮಗುವಿಗೆ ಜನ್ಮ ನೀಡಿರುವ ಸೌಂದರ್ಯಾ, ಮುದ್ದು ಮಗನಿಗೆ ಆಗಲೇ ನಾಮಕರಣವನ್ನೂ ಮಾಡಿದ್ದಾರೆ. ಹೌದು, ಮಗನಿಗೆ ವೀರ್ ರಜನಿಕಾಂತ್ ವನಂಗಮುಡಿ ಎಂದು ಹೆಸರಿಟ್ಟಿದ್ದಾರೆ.
'ದೇವರ ಮತ್ತು ಹೆತ್ತವರ ಆಶೀರ್ವಾದಿಂದ ವಿಶಾಗನ್, ವೇದ್ ಮತ್ತು ನಾನು ವೇದ್ನ ತಮ್ಮನನ್ನು ಸ್ವಾಗತಿಸಲು ಥ್ರಿಲ್ ಆಗಿದ್ದೇವೆ. ವೀರ್ ರಜನಿಕಾಂತ್ ವನಂಗಮುಡಿ...' ಎಂದು ಬರೆದುಕೊಂಡಿರುವ ಸೌಂದರ್ಯಾ ರಜನಿಕಾಂತ್ ಅವರು, ವೈದ್ಯರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಸೌಂದರ್ಯಾಗೆ ಇದು 2ನೇ ಮದುವೆ
2010 ಸೆಪ್ಟೆಂಬರ್ 3ರಂದು ಸೌಂದರ್ಯಾ ಹಾಗೂ ಅಶ್ವಿನ್ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದರು. ಏಳು ವರ್ಷ ಒಟ್ಟಿಗೆ ಇದ್ದ ಈ ಜೋಡಿ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ಇಬ್ಬರೂ ಪರಸ್ಪರ ಒಪ್ಪಿ ವಿಚ್ಛೇದನ ಪಡೆದುಕೊಂಡಿದ್ದರು. ನಂತರ 2019ರ ಫೆಬ್ರವರಿಯಲ್ಲಿ ನಟ ಹಾಗೂ ಉದ್ಯಮಿ ವಿಶಾಗನ್ ವನಂಗಮುಡಿಯೊಂದಿಗೆ ಸಪ್ತಪದಿ ತುಳಿದರು. ಚೆನ್ನೈನ ಎಂಆರ್ಸಿ ನಗರ್ನಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ನಡೆದಿದ್ದ ಅದ್ದೂರಿ ಮದುವೆ ಅನೇಕ ಗಣ್ಯರು ಆಗಮಿಸಿದ್ದರು.
ಇದೀಗ ಸೌಂದರ್ಯಾ ಮತ್ತು ವಿಶಾಗನ್ ದಂಪತಿ ಮುದ್ದಾದ ಗಂಡು ಮಗುವಿಗೆ ಪೋಷಕರಾಗಿದ್ದಾರೆ. ಆಗಸ್ಟ್ನಲ್ಲಿ ಸೌಂದಯಾಗೆ ಸೀಮಂತ ಕಾರ್ಯಕ್ರಮ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ರಜನಿಕಾಂತ್ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಮಾತ್ರ ಆಗಮಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಮಗುವಿನ ಮುಖವನ್ನು ತೋರಿಸದೆ ಮಗುವಿನ ಕೈ ಹಿಡಿದಿರುವಂತಹ ಕೆಲವು ಫೋಟೋಗಳನ್ನು ಮಾತ್ರ ಸೌಂದರ್ಯಾ ಹಂಚಿಕೊಂಡಿದ್ದಾರೆ. ಜೊತೆಗೆ ಪ್ರೆಗ್ನೆನ್ಸಿ ಫೋಟೋಶೂಟ್ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.
ಅಂದಹಾಗೆ, ಸೌಂದರ್ಯಾ ಅವರು ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ರಜನಿಕಾಂತ್ ಮತ್ತು ದೀಪಿಕಾ ಪಡುಕೋಣೆ ನಟನೆಯ 'ಕೊಚಾಡಿಯನ್' ಸಿನಿಮಾವನ್ನು ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದಲ್ಲಿ ಸೌಂದರ್ಯಾ ನಿರ್ದೇಶಿಸಿದ್ದರು. ಹಾಗೆಯೇ ಧನುಷ್ ಮತ್ತು ಕಾಜೋಲ್ ನಟಿಸಿದ್ದ 'ವಿಐಪಿ 2' ಸಿನಿಮಾವನ್ನು ಕೂಡ ಸೌಂದರ್ಯಾ ನಿರ್ದೇಶಿಸಿದ್ದರು.
Super Star Rajinikanths Daughter Soundarya Welcomes Baby Boy
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am