ಬ್ರೇಕಿಂಗ್ ನ್ಯೂಸ್
12-09-22 02:28 pm Source: Vijayakarnataka ಸಿನಿಮಾ
'ಸೂಪರ್ ಸ್ಟಾರ್' ರಜನಿಕಾಂತ್ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೌಂದರ್ಯಾ ಅವರಿಗೆ ಈಗಾಗಲೇ ವೇದ್ ಎಂಬ ಗಂಡು ಮಗನಿದ್ದಾನೆ. ಇದೀಗ ಎರಡನೇ ಮಗುವಿಗೆ ಜನ್ಮ ನೀಡಿರುವ ಸೌಂದರ್ಯಾ, ಮುದ್ದು ಮಗನಿಗೆ ಆಗಲೇ ನಾಮಕರಣವನ್ನೂ ಮಾಡಿದ್ದಾರೆ. ಹೌದು, ಮಗನಿಗೆ ವೀರ್ ರಜನಿಕಾಂತ್ ವನಂಗಮುಡಿ ಎಂದು ಹೆಸರಿಟ್ಟಿದ್ದಾರೆ.
'ದೇವರ ಮತ್ತು ಹೆತ್ತವರ ಆಶೀರ್ವಾದಿಂದ ವಿಶಾಗನ್, ವೇದ್ ಮತ್ತು ನಾನು ವೇದ್ನ ತಮ್ಮನನ್ನು ಸ್ವಾಗತಿಸಲು ಥ್ರಿಲ್ ಆಗಿದ್ದೇವೆ. ವೀರ್ ರಜನಿಕಾಂತ್ ವನಂಗಮುಡಿ...' ಎಂದು ಬರೆದುಕೊಂಡಿರುವ ಸೌಂದರ್ಯಾ ರಜನಿಕಾಂತ್ ಅವರು, ವೈದ್ಯರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಸೌಂದರ್ಯಾಗೆ ಇದು 2ನೇ ಮದುವೆ
2010 ಸೆಪ್ಟೆಂಬರ್ 3ರಂದು ಸೌಂದರ್ಯಾ ಹಾಗೂ ಅಶ್ವಿನ್ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದರು. ಏಳು ವರ್ಷ ಒಟ್ಟಿಗೆ ಇದ್ದ ಈ ಜೋಡಿ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ಇಬ್ಬರೂ ಪರಸ್ಪರ ಒಪ್ಪಿ ವಿಚ್ಛೇದನ ಪಡೆದುಕೊಂಡಿದ್ದರು. ನಂತರ 2019ರ ಫೆಬ್ರವರಿಯಲ್ಲಿ ನಟ ಹಾಗೂ ಉದ್ಯಮಿ ವಿಶಾಗನ್ ವನಂಗಮುಡಿಯೊಂದಿಗೆ ಸಪ್ತಪದಿ ತುಳಿದರು. ಚೆನ್ನೈನ ಎಂಆರ್ಸಿ ನಗರ್ನಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ನಡೆದಿದ್ದ ಅದ್ದೂರಿ ಮದುವೆ ಅನೇಕ ಗಣ್ಯರು ಆಗಮಿಸಿದ್ದರು.
ಇದೀಗ ಸೌಂದರ್ಯಾ ಮತ್ತು ವಿಶಾಗನ್ ದಂಪತಿ ಮುದ್ದಾದ ಗಂಡು ಮಗುವಿಗೆ ಪೋಷಕರಾಗಿದ್ದಾರೆ. ಆಗಸ್ಟ್ನಲ್ಲಿ ಸೌಂದಯಾಗೆ ಸೀಮಂತ ಕಾರ್ಯಕ್ರಮ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ರಜನಿಕಾಂತ್ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಮಾತ್ರ ಆಗಮಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಮಗುವಿನ ಮುಖವನ್ನು ತೋರಿಸದೆ ಮಗುವಿನ ಕೈ ಹಿಡಿದಿರುವಂತಹ ಕೆಲವು ಫೋಟೋಗಳನ್ನು ಮಾತ್ರ ಸೌಂದರ್ಯಾ ಹಂಚಿಕೊಂಡಿದ್ದಾರೆ. ಜೊತೆಗೆ ಪ್ರೆಗ್ನೆನ್ಸಿ ಫೋಟೋಶೂಟ್ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.
ಅಂದಹಾಗೆ, ಸೌಂದರ್ಯಾ ಅವರು ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ರಜನಿಕಾಂತ್ ಮತ್ತು ದೀಪಿಕಾ ಪಡುಕೋಣೆ ನಟನೆಯ 'ಕೊಚಾಡಿಯನ್' ಸಿನಿಮಾವನ್ನು ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದಲ್ಲಿ ಸೌಂದರ್ಯಾ ನಿರ್ದೇಶಿಸಿದ್ದರು. ಹಾಗೆಯೇ ಧನುಷ್ ಮತ್ತು ಕಾಜೋಲ್ ನಟಿಸಿದ್ದ 'ವಿಐಪಿ 2' ಸಿನಿಮಾವನ್ನು ಕೂಡ ಸೌಂದರ್ಯಾ ನಿರ್ದೇಶಿಸಿದ್ದರು.
Super Star Rajinikanths Daughter Soundarya Welcomes Baby Boy
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm