ಬ್ರೇಕಿಂಗ್ ನ್ಯೂಸ್
23-09-22 03:18 pm Source: Vijayakarnataka ಸಿನಿಮಾ
ನೀರ್ದೋಸೆ ಸಿನಿಮಾ ಯಶಸ್ಸಿನ ಬಳಿಕ ಜಗ್ಗೇಶ್ (Jaggesh) ಹಾಗೂ ವಿಜಯ ಪ್ರಸಾದ್ (Vijay Prasad) ಜೋಡಿ 'ತೋತಾಪುರಿ' ಸಿನಿಮಾ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ'ತೋತಾಪುರಿ' ಸಹ ಇದೆ. ಈ ಸಿನಿಮಾ ಕಾಮಿಡಿ ಜತೆಗೆ ಭರಪೂರ ಮನರಂಜನೆ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದರ ಎರಡೂ ಭಾಗದ ಚಿತ್ರೀಕರಣವನ್ನು ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿರುವುದು ವಿಶೇಷ.ಚಾಪ್ಟರ್ 1 ಹಾಗೂ ಚಾಪ್ಟರ್ 2 ರೂಪದಲ್ಲಿ ರಿಲೀಸ್ ಆಗಲಿರುವ 'ತೋತಾಪುರಿ' ಸಿನಿಮಾದ ಮೊದಲ ಚಾಪ್ಟರ್ ಸೆಪ್ಟೆಂಬರ್ 30ರಂದು ವಿಶ್ವದಾದ್ಯಂತ ತೆರೆಕಾಣಲಿದೆ.
200 ಮಿಲಿಯನ್ ಮಹೋತ್ಸವ
'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್...' ಹಾಡು ವಿಶ್ವದಾದ್ಯಂತ ಸದ್ದು ಮಾಡಿದ್ದು ಗೊತ್ತೇ ಇದೆ. ದೊಡ್ಡವರಿಂದ ಚಿಕ್ಕವರವರೆಗೂ, ದೇಶ - ವಿದೇಶದವರೂ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಿಂದ ಹಿಡಿದು ಯಾವುದೇ ಸಮಾರಂಭ, ಮನೆ, ಕಾರು, ಕಚೇರಿ ಮೊದಲಾದ ಕಡೆಯೂ 'ತೋತಾಪುರಿ' ಹಾಡಿನದ್ದೇ ಕಲರವ. ಹಾಡನ್ನು ರೀ ಕ್ರಿಯೇಟ್ ಮಾಡಿದವರೆಷ್ಟೋ? ರೀಲ್ಸ್, ಡಾನ್ಸ್ ಮಾಡಿದವರು ಸಾವಿರಾರು ಮಂದಿ. ಇವೆಲ್ಲದರ ಜತೆಗೆ 'ಬಾಗ್ಲು ತೆಗಿ ಮೇರಿ ಜಾನ್' 200 ಮಿಲಿಯನ್ ಹಿಟ್ಸ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವಿಜಯ ಪ್ರಸಾದ್ ಸಾಹಿತ್ಯ ರಚಿಸಿದ್ದು, ವ್ಯಾಸರಾಜ್ ಸೋಸಲೆ ಹಾಗೂ ಅನನ್ಯಾ ಭಟ್ ದನಿಗೂಡಿಸಿದ್ದಾರೆ.

ತೋತಾಪುರಿ ತಾರಾಗಣದ ದಾಖಲೆ
'ತೋತಾಪುರಿ' ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್ ಮಾಡಿರುವುದು ಇದೇ ಮೊದಲು ಎಂಬುದು ಚಿತ್ರತಂಡದ ಅಭಿಪ್ರಾಯ. ಜಗ್ಗೇಶ್ ನಟಿಸಿರುವ ಸಿನಿಮಾಗಳ ಪೈಕಿ 'ತೋತಾಪುರಿ' ಬಿಗ್ ಬಜೆಟ್ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಡಾಲಿ ಧನಂಜಯ, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ, ಹೇಮಾ ದತ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿದ್ದಾರೆ.
'ತೋತಾಪುರಿ' ವಿಶೇಷ ಕಥೆ ಇರುವ ಮನರಂಜನಾತ್ಮಕ ಸಿನಿಮಾ. ಇದರಲ್ಲಿ ಹಾಸ್ಯದ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಪ್ರಚಲಿತ ಘಟನೆಗಳು ಇವೆ ಎಂಬುದು ನೋಡಿದವರಿಗೆ ತಿಳಿಯುತ್ತದೆ ಎಂದು ನಿರ್ದೇಶಕ ವಿಜಯ ಪ್ರಸಾದ್ ತಿಳಿಸಿದ್ದಾರೆ.
Jaggesh Starrer Totapuri To Release On September 30.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm