ಬ್ರೇಕಿಂಗ್ ನ್ಯೂಸ್
23-09-22 03:18 pm Source: Vijayakarnataka ಸಿನಿಮಾ
ನೀರ್ದೋಸೆ ಸಿನಿಮಾ ಯಶಸ್ಸಿನ ಬಳಿಕ ಜಗ್ಗೇಶ್ (Jaggesh) ಹಾಗೂ ವಿಜಯ ಪ್ರಸಾದ್ (Vijay Prasad) ಜೋಡಿ 'ತೋತಾಪುರಿ' ಸಿನಿಮಾ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ'ತೋತಾಪುರಿ' ಸಹ ಇದೆ. ಈ ಸಿನಿಮಾ ಕಾಮಿಡಿ ಜತೆಗೆ ಭರಪೂರ ಮನರಂಜನೆ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದರ ಎರಡೂ ಭಾಗದ ಚಿತ್ರೀಕರಣವನ್ನು ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿರುವುದು ವಿಶೇಷ.ಚಾಪ್ಟರ್ 1 ಹಾಗೂ ಚಾಪ್ಟರ್ 2 ರೂಪದಲ್ಲಿ ರಿಲೀಸ್ ಆಗಲಿರುವ 'ತೋತಾಪುರಿ' ಸಿನಿಮಾದ ಮೊದಲ ಚಾಪ್ಟರ್ ಸೆಪ್ಟೆಂಬರ್ 30ರಂದು ವಿಶ್ವದಾದ್ಯಂತ ತೆರೆಕಾಣಲಿದೆ.
200 ಮಿಲಿಯನ್ ಮಹೋತ್ಸವ
'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್...' ಹಾಡು ವಿಶ್ವದಾದ್ಯಂತ ಸದ್ದು ಮಾಡಿದ್ದು ಗೊತ್ತೇ ಇದೆ. ದೊಡ್ಡವರಿಂದ ಚಿಕ್ಕವರವರೆಗೂ, ದೇಶ - ವಿದೇಶದವರೂ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಿಂದ ಹಿಡಿದು ಯಾವುದೇ ಸಮಾರಂಭ, ಮನೆ, ಕಾರು, ಕಚೇರಿ ಮೊದಲಾದ ಕಡೆಯೂ 'ತೋತಾಪುರಿ' ಹಾಡಿನದ್ದೇ ಕಲರವ. ಹಾಡನ್ನು ರೀ ಕ್ರಿಯೇಟ್ ಮಾಡಿದವರೆಷ್ಟೋ? ರೀಲ್ಸ್, ಡಾನ್ಸ್ ಮಾಡಿದವರು ಸಾವಿರಾರು ಮಂದಿ. ಇವೆಲ್ಲದರ ಜತೆಗೆ 'ಬಾಗ್ಲು ತೆಗಿ ಮೇರಿ ಜಾನ್' 200 ಮಿಲಿಯನ್ ಹಿಟ್ಸ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವಿಜಯ ಪ್ರಸಾದ್ ಸಾಹಿತ್ಯ ರಚಿಸಿದ್ದು, ವ್ಯಾಸರಾಜ್ ಸೋಸಲೆ ಹಾಗೂ ಅನನ್ಯಾ ಭಟ್ ದನಿಗೂಡಿಸಿದ್ದಾರೆ.

ತೋತಾಪುರಿ ತಾರಾಗಣದ ದಾಖಲೆ
'ತೋತಾಪುರಿ' ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್ ಮಾಡಿರುವುದು ಇದೇ ಮೊದಲು ಎಂಬುದು ಚಿತ್ರತಂಡದ ಅಭಿಪ್ರಾಯ. ಜಗ್ಗೇಶ್ ನಟಿಸಿರುವ ಸಿನಿಮಾಗಳ ಪೈಕಿ 'ತೋತಾಪುರಿ' ಬಿಗ್ ಬಜೆಟ್ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಡಾಲಿ ಧನಂಜಯ, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ, ಹೇಮಾ ದತ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿದ್ದಾರೆ.
'ತೋತಾಪುರಿ' ವಿಶೇಷ ಕಥೆ ಇರುವ ಮನರಂಜನಾತ್ಮಕ ಸಿನಿಮಾ. ಇದರಲ್ಲಿ ಹಾಸ್ಯದ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಪ್ರಚಲಿತ ಘಟನೆಗಳು ಇವೆ ಎಂಬುದು ನೋಡಿದವರಿಗೆ ತಿಳಿಯುತ್ತದೆ ಎಂದು ನಿರ್ದೇಶಕ ವಿಜಯ ಪ್ರಸಾದ್ ತಿಳಿಸಿದ್ದಾರೆ.
Jaggesh Starrer Totapuri To Release On September 30.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm