ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.

ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.

ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm