ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.

ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.

ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm