ಬ್ರೇಕಿಂಗ್ ನ್ಯೂಸ್
30-09-22 02:01 pm Source: Vijayakarnataka ಸಿನಿಮಾ
'ಲೂಸಿಯಾ' ಸಿನಿಮಾ ಖ್ಯಾತಿಯ ಪವನ್ ಕುಮಾರ್ ಅವರು ಮಲಯಾಳಂ ನಟ ಫಹಾದ್ ಫಾಸಿಲ್ ( Fahadh Faasil ) ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಸಿನಿಮಾ ಬಗ್ಗೆ ನಿರ್ಮಾಣ ಸಂಸ್ಥೆಯೇ ಮಾಹಿತಿ ನೀಡಲಿ ಎಂದು ಪವನ್ ಅವರು ( Pawan Kumar ) ಮೌನ ತಾಳಿದ್ದರು. ಇದೀಗ ಈ ಬಗ್ಗೆ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯು ಟೈಟಲ್ ರಿವೀಲ್ ನೀಡಿ ವಿಷಯ ಅಧಿಕೃತಪಡಿಸಿದೆ.
ಫಹಾದ್ ಫಾಸಿಲ್ ಹಾಗೂ ಪವನ್ ಕುಮಾರ್ ಅವರ ಸಿನಿಮಾಕ್ಕೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಲಿದೆ. ಈ ಚಿತ್ರದಲ್ಲಿ 'ಸೂರರೈ ಪೋಟ್ರು' ಸಿನಿಮಾ ಖ್ಯಾತಿಯ ಅಪರ್ಣಾ ಬಾಲಮುರಳಿ ನಾಯಕಿಯಾಗಿ ನಟಿಸಲಿದ್ದಾರೆ. ಪ್ರೀತಾ ಜಯರಾಮನ್ ಅವರ ಕ್ಯಾಮರಾ ಕೆಲಸ, ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಈ ಚಿತ್ರಕ್ಕಿದೆ. ಮಲಯಾಳಂ, ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಅಂದಹಾಗೆ ಈ ಚಿತ್ರಕ್ಕೆ 'ಧೂಮಮ್' ಎಂದು ಹೆಸರು ಇಡಲಾಗಿದೆ.

'ಧೂಮಮ್' ಸಿನಿಮಾಕ್ಕೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಡಿ ವಿಜಯ್ ಕಿರಗಂದೂರು ಹಣ ಹೂಡುತ್ತಿದ್ದಾರೆ. ಈಗಾಗಲೇ 'ಕೆಜಿಎಫ್' ಸಿಕ್ವೇಲ್ಗಳ ಮೂಲಕ ದೊಡ್ಡ ಯಶಸ್ಸು ಪಡೆದಿರುವ ಈ ಸಂಸ್ಥೆ ಕೈತುಂಬ ಸಿನಿಮಾಗಳಿವೆ. ರಕ್ಷಿತ್ ಶೆಟ್ಟಿ ಜೊತೆಗೆ 'ರಿಚರ್ಡ್ ಆಂಟನಿ', ನಟ ಜಗ್ಗೇಶ್ ಜೊತೆ 'ರಾಘವೇಂದ್ರ ಸ್ಟೋರ್ಸ್', ಪ್ರಭಾಸ್ ಜೊತೆ 'ಸಲಾರ್' ಮುಂತಾದ ಸಿನಿಮಾಗಳನ್ನು ಹೊಂಬಾಳೆ ನಿರ್ಮಾಣ ಮಾಡುತ್ತಿದೆ.
ಪವನ್ ಕುಮಾರ್ ಸಿನಿಮಾ ಮಾಡಿದರೆ ಕನ್ನಡದ ತಂತ್ರಜ್ಞರನ್ನು ತಮ್ಮ ಜತೆ ಎಲ್ಲಾ ಭಾಷೆಗೂ ಕರೆದುಕೊಂಡು ಹೋಗುತ್ತಾರೆ. ಅಂತೆಯೇ ಈ ಸಿನಿಮಾದಲ್ಲಿ ಕನ್ನಡದ ತಂತ್ರಜ್ಞರೇ ಕೆಲಸ ಮಾಡುತ್ತಿದ್ದಾರೆ, ಪುನೀತ್ ರಾಜ್ಕುಮಾರ್ಗೆ ಪವನ್ ಬರೆದುಕೊಂಡಿದ್ದ ‘ದ್ವಿತ್ವ’ ಸಿನಿಮಾದ ಕಥೆಯನ್ನು ಫಹಾದ್ ಫಾಸಿಲ್ಗೆ ಮಾಡುತ್ತಾರೆ ಎಂಬ ಚರ್ಚೆಗಳು ಈಗಾಗಲೇ ಶುರುವಾಗಿವೆ. ಅದಕ್ಕೆ ಪವನ್ ಅವರೇ ಉತ್ತರ ನೀಡಬೇಕಿದೆ.
ತೆಲುಗು ಮತ್ತು ಹಿಂದಿಯಲ್ಲಿ ವೆಬ್ ಸಿರೀಸ್ ಮಾಡಿ ಗಮನ ಸೆಳೆದಿರುವ, ತಮಿಳಿನಲ್ಲಿ ತಮ್ಮದೇ ‘ಯು ಟರ್ನ್’ ಸಿನಿಮಾ ಮಾಡಿ ಹೆಸರು ಮಾಡಿರುವ ಪವನ್ ಅವರು ಸದ್ಯ 'ಗಾಳಿಪಟ 2' ಚಿತ್ರದಿಂದ ಸಿಕ್ಕ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಇದರ ಜೊತೆಗೆ ಅವರು ಸಿನಿಮಾ ನಿರ್ದೇಶನವನ್ನು ಗಮನದಲ್ಲಿಟ್ಟುಕೊಂಡು, ಆ ನಿಟ್ಸಿನಲ್ಲಿ ಕೆಲಸ ಮಾಡುತ್ತಲಿದ್ದಾರೆ.
ಕಳೆದ ವರ್ಷ ಪವನ್ ಕುಮಾರ್ ‘ದ್ವಿತ್ವ’ ಸಿನಿಮಾ ( Dvitva ) ಘೋಷಿಸಿದ್ದರು. ಇದರಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟಿಸಬೇಕಿತ್ತು. ಕಂಟೆಂಟ್ ಸಿನಿಮಾ ಮಾಡುವ ಪವನ್ ಅವರು ಪುನೀತ್ ಜೊತೆ ಸೇರಿಕೊಂಡು ಅದ್ಭುತವಾದ ಚಿತ್ರ ಕೊಡುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಪುನೀತ್ ಅವರ ಅಕಾಲಿಕ ಮರಣದಿಂದ ಈ ಸಿನಿಮಾ ನಿಂತು ಹೋಯಿತು. ಇದಾದ ಮೇಲೆ ಪವನ್ ಏನು ಮಾಡುತ್ತಾರೆ ಎಂಬ ಪ್ರಶ್ನೆಯಿತ್ತು. ಅದಕ್ಕೀಗ ಅಧಿಕೃತವಾಗಿಯೇ ಉತ್ತರ ಸಿಕ್ಕಿದೆ.
Hombale Films Announces New Movie With Fahadh Faasil Aparna Balamurali Pawan Kumar Titled As Dhoomam.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm