ಬ್ರೇಕಿಂಗ್ ನ್ಯೂಸ್
21-10-22 01:34 pm Source: Vijayakarnataka ಸಿನಿಮಾ
'ಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಅವರ ( Puneeth Rajkumar ) ಹೆಸರಿನಲ್ಲಿ ಬೆಂಗಳೂರಿನ ಅರೆಮನೆ ಮೈದಾನದಲ್ಲಿ ಇಂದು ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಟ್ಟಿದ್ದು, ಬೇರೆ ಬೇರೆ ರಾಜ್ಯಗಳ ಚಿತ್ರರಂಗಗಳಿಂದ ಸ್ಟಾರ್ ನಟರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪುನೀತ ಪರ್ವ ಕಾರ್ಯಕ್ರಮ ಎಲ್ಲಿ ನಡೆಯಲಿದೆ?
ಇಂದು ಸಂಜೆ ಆರು ಗಂಟೆಗೆ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ ಪುನೀತ ಪರ್ವ ಕಾರ್ಯಕ್ರಮ ಆರಂಭವಾಗಲಿದೆ. ಅಕ್ಟೋಬರ್ 29ರಂದು ಪುನೀತ್ ರಾಜ್ಕುಮಾರ್ಅವರ ಮೊದಲ ವರ್ಷದ ಪುಣ್ಯಸ್ಮರಣೆ. ಅಕ್ಟೋಬರ್ 21ರಂದು ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 1ರಂದು ಪುನೀತ್ ರಾಜ್ ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ.
ಸ್ಟಾರ್ ಕಲಾವಿದರು ಭಾಗಿ
‘ಪುನೀತ ಪರ್ವ’ಕಾರ್ಯಕ್ರಮಕ್ಕೆ ಆಗಮಿಸುವವರು ಬಿಳಿ ಬಣ್ಣದ ಉಡುಪು ಧರಿಸಲು ಮನವಿ ಮಾಡಲಾಗಿದೆ. ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ರಾಕಿಂಗ್ ಸ್ಟಾರ್ಯಶ್, ತಮಿಳು ನಟ ಸೂರ್ಯ, ತೆಲುಗಿನ ಬಾಲಯ್ಯ, ರಾಣಾ ದಗ್ಗುಬಾಟಿ ಸೇರಿದಂತೆ ದಕ್ಷಿಣ ಭಾರತದ ಹಲವು ನಟರು ಪಾಲ್ಗೊಳ್ಳಲಿದ್ದಾರೆ. ಕನ್ನಡದ ಎಲ್ಲಾನಟ, ನಟಿಯರು ಈ ಕಾರ್ಯಕ್ರಮದಲ್ಲಿ ಇರಲಿದ್ದಾರೆ.
ಭರ್ಜರಿ ಗಾನಸುಧೆ
‘ಪುನೀತ ಪರ್ವ’ಕಾರ್ಯಕ್ರಮದಲ್ಲಿ ಹಾಡು, ಡಾನ್ಸ್ ಕೂಡ ಇರಲಿವೆ. ಕುನಾಲ್ ಗಾಂಜಾವಾಲ, ಅರ್ಮಾನ್ ಮಲಿಕ್ ಗಾನಸುಧೆ ಹರಿಸಲಿದ್ದಾರೆ. ಪ್ರಭುದೇವ ಮತ್ತು ನಟಿ ರಮ್ಯಾ ನೃತ್ಯ ಮಾಡಲಿದ್ದಾರೆ.
ಅಭಿಮಾನಿಗಳ ದಂಡು
‘ಪುನೀತ ಪರ್ವ’ಕಾರ್ಯಕ್ರಮ ಅಪ್ಪು ಪತ್ನಿ ಅಶ್ವಿನಿ ಅವರ ನೇತೃತ್ವದಲ್ಲಿ ನಡೆಯಲಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ ಅವರೇ ಇದರ ಮುಂದಾಳತ್ವ ವಹಿಸಿಕೊಂಡಿದ್ದಾರೆ. ‘ಈ ಕಾರ್ಯಕ್ರಮ ಎಲ್ಲರ ಕಣ್ಣಿಗೆ ಹಬ್ಬದ ಹಾಗೆ ಇರುತ್ತದೆ. ಇದನ್ನು ಅಭಿಮಾನಿಗಳಿಗಾಗಿ ಮಾಡುತ್ತಿದ್ದೇವೆ. ಎಲ್ಲರಿಗೂ ತಲುಪಿಸೋದು ನಮ್ಮ ಧರ್ಮ. ಅಪ್ಪು ಯಾರೊಬ್ಬರ ಸ್ವತ್ತಲ್ಲ. ಇಡೀ ಕರ್ನಾಟಕದ ಸ್ವತ್ತು. ಕಾರ್ಯಕ್ರಮಕ್ಕೆ ಎಷ್ಟು ಜನ ಬರುತ್ತಾರೆ ಅಂತ ನಾವು ಲೆಕ್ಕ ಹಾಕಲು ಹೋಗಿಲ್ಲ. ಎಷ್ಟೇ ಜನ ಬಂದರೂ ಅವರಿಗೆ ಕಾರ್ಯಕ್ರಮ ತೋರಿಸುವ ಕೆಲಸ ನಮ್ಮದು. ಅದಕ್ಕೆ ನಾವು ರೆಡಿಯಿದ್ದೇವೆ’ ಎಂದು ರಾಘವೇಂದ್ರ ರಾಜ್ಕುಮಾರ್ತಿಳಿಸಿದ್ದಾರೆ.
2021 ಅಕ್ಟೋಬರ್ 29ರಂದು ಪುನೀತ್ ರಾಜ್ಕುಮಾರ್ ಅವರು ಹೃದಯಾಘಾತದಿಂದ ನಿಧನರಾದರು.
South Indian Star Actors Attend Puneeth Rajkumar Puneeth Parva.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm