ಬ್ರೇಕಿಂಗ್ ನ್ಯೂಸ್
02-12-22 01:23 pm Source: Vijayakarnataka ಸಿನಿಮಾ
ಸ್ಯಾಂಡಲ್ವುಡ್ನಲ್ಲೀಗ ಮದುವೆಗಳದ್ದೇ ಸುದ್ದಿ. ಮೊನ್ನೆಯಷ್ಟೇ ಅದಿತಿ ಪ್ರಭುದೇವ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರೂ ಇನ್ನೇನು ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದೆ. ಅದಕ್ಕಿಂತಲೂ ಮುನ್ನ ಹಲವು ಕಿರುತೆರೆ ನಟ ನಟಿಯರು ವಿವಾಹವಾಗಿದ್ದಾರೆ.
ಈಗ ಮತ್ತೊಂದು ಜೋಡಿ ಮದುವೆಯಾಗಲು ಸಿದ್ಧವಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ( Abhishek Ambareesh ) ಮತ್ತು ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಈಗ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಮೂಲಗಳ ಪ್ರಕಾರ ಡಿಸೆಂಬರ್ 11ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಿಶ್ಚಿತಾರ್ಥ ನಡೆಯಲಿದೆ. ರೆಬಲ್ ಸ್ಟಾರ್ ಅವರ ಮುದ್ದಿನ ಪುತ್ರ ಅಭಿ ವಿವಾಹವಾಗುತ್ತಿದ್ದಾರೆ ಎಂದರೆ ವಧು ಯಾರು ಎಂಬ ಕುತೂಹಲ ಎಲ್ಲರಿಗೂ ಇದೆ. ಆ ಹುಡುಗಿ ಬೇರೆ ಯಾರೂ ಅಲ್ಲ, ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಬಿದ್ದಪ್ಪ ( Aviva Bidapa ).

ಲವಲvkಯ ಆಪ್ತ ಮೂಲವೊಂದು ಈ ವಿಷಯವನ್ನು ಖಚಿತಪಡಿಸಿದ್ದು, ಡಿಸೆಂಬರ್ 11ರಂದು ಎರಡೂ ಕುಟುಂಬದವರ ಸಮ್ಮುಖದಲ್ಲಿ ಜೋಡಿ ಉಂಗುರ ಬದಲಾಯಿಸಿಕೊಳ್ಳಲಿದೆ. ಅಭಿ ಮತ್ತು ಅವಿವಾ ವಿವಾಹದ ಸುದ್ದಿಯನ್ನು ಕುಟುಂಬದ ವತಿಯಿಂದ ಡಿಸೆಂಬರ್ 8ರಂದು ಅಧಿಕೃತವಾಗಿ ಅನೌನ್ಸ್ ಮಾಡಲಿದ್ದಾರಂತೆ. 1991ರ ಡಿಸೆಂಬರ್ 8ರಂದು ಸುಮಲತಾ ಮತ್ತು ಅಂಬಿ ವಿವಾಹವಾಗಿದ್ದರು. ಆ ಕಾರಣಕ್ಕಾಗಿ ಅಂದು ಅಧಿಕೃತವಾಗಿ ಅನೌನ್ಸ್ ಮಾಡಬೇಕು ಎಂದು ಕುಟುಂಬ ನಿರ್ಧರಿಸಿದೆಯಂತೆ.
ಅವಿವಾ ಮತ್ತು ಅಭಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ನಾಲ್ಕು ವರ್ಷಗಳಿಂದಲೂ ಬಹಳ ಗುಪ್ತವಾಗಿದ್ದ ವಿಷಯ ಎಂಗೇಜ್ಮೆಂಟ್ ವಿಷಯ ಹೊರಬಂದ ಕೂಡಲೇ ಸುದ್ದಿಯಾಗುತ್ತಿದೆ. ಈ ಬಗ್ಗೆ ಅಭಿಷೇಕ್ ಕುಟುಂಬ ಮತ್ತು ಅವಿವಾ ಕುಟುಂಬದ ಕಡೆಯಿಂದ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪೋನ್ ಸಂಪರ್ಕಕ್ಕೂ ಸಹ ಈ ಎರಡೂ ಕುಟುಂಬದವರು ಮಾಧ್ಯಮಗಳಿಗೆ ಸಿಕ್ಕಿಲ್ಲ. ಅಭಿಷೇಕ್ ಅಂಬರೀಶ್ ಸದ್ಯ ಒಂದರ ಹಿಂದೆ ಒಂದು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಮೊನ್ನೆಯಷ್ಟೇ ಅವರ ‘ಕಾಳಿ’ ಸಿನಿಮಾದ ಮುಹೂರ್ತ ನಡೆದಿದೆ. ಇದಾದ ಮೇಲೆ ಮಹೇಶ್ ಕುಮಾರ್ ನಿರ್ದೇಶನದ ಹೆಸರಿಡದ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಈಗ ದುನಿಯಾ ಸೂರಿಯವರ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಚಿತ್ರೀಕರಣದಲ್ಲಿ ಬಿಡುವಿಲ್ಲದಂತೆ ಅಭಿ ತೊಡಗಿಸಿಕೊಂಡಿದ್ದಾರೆ. ಅವಿವಾ ಬಿದ್ದಪ್ಪ ತನ್ನ ತಂದೆಯಂತೆ ಫ್ಯಾಷನ್ ಕ್ಷೇತ್ರದಲ್ಲಿದ್ದು, ಫ್ಯಾಷನ್ ಮ್ಯಾನೇಜ್ಮೆಂಟ್ ಕಂಪನಿಯೊಂದರ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ.
Abhishek Ambareesh And Aviva Bidapa Engagement On December 11.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm