ಬ್ರೇಕಿಂಗ್ ನ್ಯೂಸ್
09-12-22 01:38 pm Source: Vijayakarnataka ಸಿನಿಮಾ
'ಗಾಡ್ ಆಫ್ ಮಾಸ್' ಎಂದೇ ಕರೆಸಿಕೊಳ್ಳುವ ತೆಲುಗು ನಟ ನಂದಮುರಿ ಬಾಲಕೃಷ್ಣ ( Nandamuri Balakrishna ) 108ನೇ ಸಿನಿಮಾ ಇಂದು ಅದ್ದೂರಿಯಾಗಿ ಸೆಟ್ಟೇರಿದೆ. ಬಾಲಕೃಷ್ಣ 108ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಇಬ್ಬರ ಕ್ರೇಜಿ ಕಾಂಬಿನೇಶನ್ನಲ್ಲಿ ಮೂಡಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರಕ್ಕೆ ಶೈನ್ ಸ್ಕ್ರೀನ್ಸ್ ಬ್ಯಾನರ್ ನಡಿ ಸಾಹು ಗರಪಟಿ ಮತ್ತು ಹರೀಶ್ ಪೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.
ಅದ್ದೂರಿಯಾಗಿ ನಡೆದ ಮುಹೂರ್ತ
NBK108ನೇ ಚಿತ್ರಕ್ಕೆ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದ್ದು, ನಿರ್ಮಾಪಕ ದಿಲ್ ರಾಜು ಕ್ಯಾಮೆರಾ ಚಾಲನೆ, ಲೆಜೆಂಡರಿ ನಿರ್ದೇಶಕ ಕೆ.ರಾಘವೇಂದ್ರ ರಾವ್ ಮುಹೂರ್ತ ಸೀನ್ಗೆ ಆಕ್ಷನ್ ಕಟ್ ಹೇಳುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಪ್ಯಾನ್ ಇಂಡಿಯಾ ಸಿನಿಮಾ
ಬಾಲಕೃಷ್ಣ ಅಭಿನಯದ 108ನೇ ಸಿನಿಮಾ ಇದಾಗಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿ ಈ ಚಿತ್ರ ಮೂಡಿ ಬರ್ತಿದೆ. ಸದ್ಯದಲ್ಲೇ ಟೈಟಲ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ. ಇಂದಿನಿಂದಲೇ ಚಿತ್ರೀಕರಣ ಆರಂಭವಾಗಲಿದ್ದು, ಆಕ್ಷನ್ ಸೀನ್ ನೊಂದಿಗೆ ಚಿತ್ರೀಕರಣ ಆರಂಭವಾಗಲಿದೆ. ಆಕ್ಷನ್ ಸೀನ್ ಸೆರೆ ಹಿಡಿಯಲೆಂದೇ ರಾಜೀವನ್ ಅವರ ನೇತೃತ್ವದಲ್ಲಿ ದೊಡ್ಡ ಸೆಟ್ಗಳನ್ನು ನಿರ್ಮಾಣ ಮಾಡಲಾಗಿದ್ದು, ಖ್ಯಾತ ಸಾಹಸ ನಿರ್ದೇಶಕ ವಿ. ವೆಂಕಟ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಕನ್ನಡ ನಟಿ ಶ್ರೀಲೀಲಾ ನಾಯಕಿ
ಆಕ್ಷನ್ ಹಾಗೂ ಮಾಸ್ ಎಲಿಮೆಂಟ್ ಒಳಗೊಂಡ ಈ ಚಿತ್ರಕ್ಕೆ ಬಾಲಕೃಷ್ಣ ಅವರ ಮಾಸ್ ಇಮೇಜ್, ಸ್ಟಾರ್ ಡಂ ಎಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅನಿಲ್ ರವಿಪುಡಿ ಪವರ್ ಫುಲ್ ಕಥೆ ಹೆಣೆದಿದ್ದಾರೆ. ಈ ಚಿತ್ರದಲ್ಲಿ ಕನ್ನಡದ ನಟಿ ಶ್ರೀಲೀಲಾ ( Sreeleela ) ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಎಸ್. ತಮನ್ ಸಂಗೀತ ನಿರ್ದೇಶನವಿದೆ.
ದೊಡ್ಡ ತಾರಾಗಣ
ಬಾಲಕೃಷ್ಣ, ಅನಿಲ್ ರವಿಪುಡಿ, ಎಸ್. ತಮನ್ ಈ ಮೂರು ಕಾಂಬಿನೇಶನ್ ಒಂದಾಗಿರೋ ಈ ಚಿತ್ರದ ಮೇಲೆ ಬಾಲಯ್ಯ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿ.ರಾಮ್ ಪ್ರಸಾದ್ ಕ್ಯಾಮೆರಾ ನಿರ್ದೇಶನ, ತಮ್ಮಿ ರಾಜು ಸಂಕಲನ ಚಿತ್ರಕ್ಕಿದೆ. ಸದ್ಯದಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.
Nandamuri Balakrishna Nbk 108 Movie Heroine Sreeleela.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm