ಬ್ರೇಕಿಂಗ್ ನ್ಯೂಸ್
28-12-22 06:03 pm Source: Vijayakarnataka ಸಿನಿಮಾ
ಚಂದನ್ ಶೆಟ್ಟಿ ಈಗಾಗಲೇ ಗಾಯಕರಾಗಿ, ಗೀತ ರಚನಕಾರರಾಗಿ, ಸಂಗೀತ ನಿರ್ದೇಶಕರಾಗಿ ಸಖತ್ ಫೇಮಸ್ ಆಗಿದ್ದಾರೆ. ಇದೆಲ್ಲದರ ಜೊತೆಗೆ ನಟನೆಯನ್ನೂ ಅವರು ಕೂಡ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಸದ್ಯ ಅವರು 'ಸೂತ್ರಧಾರಿ' ಅನ್ನೋದ ಸಿನಿಮಾದಲ್ಲಿ ಹೀರೋ ಆಗಿದ್ಧಾರೆ. ಈ ಸಿನಿಮಾದ ಒಂದು ಹಾಡು ಈಚೆಗೆ ರಿಲೀಸ್ ಆಗಿದೆ. ನ್ಯೂ ಇಯರ್ ಸೆಲೆಬ್ರೇಷನ್ ಮೂಡ್ನಲ್ಲಿ ಇರುವವರಿಗೆ ಈ ಹಾಡು ಸಖತ್ ಕಿಕ್ ನೀಡುವುದರಲ್ಲಿ ಸಂಶಯವೇ ಇಲ್ಲ. 'ಡ್ಯಾಶ್ ಸಾಂಗ್..' ಎಂದೇ ಇದನ್ನು ಚಂದನ್ ಶೆಟ್ಟಿ ಕರೆದಿದ್ದಾರೆ.
ಈ ಹಾಡಿನ ಬಗ್ಗೆ ಮಾಹಿತಿ ಹಂಚಿಕೊಂಡ ಚಂದನ್ ಶೆಟ್ಟಿ, 'ಹೊಸ ವರ್ಷಕ್ಕೆ ನಮ್ಮ 'ಸೂತ್ರಧಾರಿ' ಸಿನಿಮಾದಿಂದ 'ಡ್ಯಾಶ್' ಹಾಡು ಬಿಡುಗಡೆಯಾಗಿದೆ. ಇದನ್ನು ಹೊಸ ವರ್ಷಕ್ಕೆ ಉಡುಗೊರೆ ಎಂದುಕೊಳ್ಳಬಹುದು. 'ಡ್ಯಾಶ್..' ಎಂದರೆ ಏನು ಅಂತ ಎಲ್ಲಾ ಕೇಳುತ್ತಿದ್ದಾರೆ. ಡ್ಯಾಶ್ ಎಂದರೆ ಖಾಲಿ ಜಾಗ. ಅಲ್ಲಿ ನೀವು ಏನು ಬೇಕಾದರೂ ಬರೆದುಕೊಳ್ಳಬಹುದು. ಈ ಹಾಡಿಗೆ 'ಭಜರಂಗಿ' ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಸಂಜನಾ ಆನಂದ್ ಈ ಹಾಡಿಗೆ ನನ್ನ ಜೊತೆ ಹೆಜ್ಜೆ ಹಾಕಿದ್ದಾರೆ. ನಿರ್ಮಾಪಕ ನವರಸನ್ ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾನು ಹಾಗೂ ಚೇತನ್ ಕುಮಾರ್ ಈ ಹಾಡನ್ನು ಬರೆದಿದ್ದೇವೆ. ನಾನೇ ಸಂಗೀತ ನೀಡಿದ್ದೇನೆ' ಎಂದು ಮಾಹಿತಿ ನೀಡಿದ್ದಾರೆ.
![]()
ಒಂದೇ ದಿನಕ್ಕೆ ಈ ಹಾಡು 1.6 ಮಿಲಿಯನ್ ವೀವ್ಸ್ ಪಡೆದುಕೊಂಡಿರುವುದು ವಿಶೇಷ. ಈ ಹಾಡಿನಲ್ಲಿ ಕಾಣಿಸಿಕೊಂಡ ಖುಷಿಯಲ್ಲಿದ್ದರು ನಟಿ ಸಂಜನಾ ಆನಂದ್. 'ನಾನು ಮೊದಲ ಬಾರಿಗೆ ಸ್ಪೆಷಲ್ ಸಾಂಗ್ ಒಂದರಲ್ಲಿ ನಟಿಸಿದ್ದೇನೆ. ಚಂದನ್ ಶೆಟ್ಟಿ ಅವರ ಜೊತೆ ಡ್ಯಾನ್ಸ್ ಮಾಡಿರುವುದು ಖುಷಿಯಾಗಿದೆ. ಈ ಹಾಡು ತುಂಬ ಅದ್ಭುತವಾಗಿ ಮೂಡಿಬಂದಿದೆ..' ಎಂದರು ಸಂತೋಷ ಹಂಚಿಕೊಂಡರು ಸಂಜನಾ ಆನಂದ್.
ಚಿತ್ರದ ನಿರ್ಮಾಪಕ ನವರಸನ್ ಮಾತನಾಡಿ, 'ಚಂದನ್ ಶೆಟ್ಟಿ ಅವರು ಹೊಸ ವರ್ಷಕ್ಕೆ ಹೊಸ ಹಾಡೊಂದನ್ನು ಬಿಡುಗಡೆ ಮಾಡುತ್ತಾರೆ. ಈ ಬಾರಿ ನಮ್ಮ ಚಿತ್ರದ ಹಾಡೊಂದನ್ನು ಹೊಸ ವರ್ಷಕ್ಕೆ ಬಿಡುಗಡೆ ಮಾಡುವ ಆಸೆಯಿತ್ತು. ಆದರೆ ಸಮಯ ಕಡಿಮೆ ಇತ್ತು. ಚಂದನ್ ಶೆಟ್ಟಿ ಅವರ ಬಳಿ ಈ ವಿಷಯ ಹೇಳಿದೆ. ಕೇವಲ ಎರಡು ದಿನಗಳ ಹಿಂದೆ ಈ ಹಾಡಿನ ಚಿತ್ರೀಕರಣವಾಗಿ ಈಗ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ನಾಯಕಿಯಾಗಿ ಅಪೂರ್ವ ಕಾಣಿಸಿಕೊಂಡಿದ್ದಾರೆ. ಆದರೆ ಈ ವಿಶೇಷ ಹಾಡಿಗೆ ಚಂದನ್ ಶೆಟ್ಟಿ ಅವರ ಜೊತೆ ಸಂಜನಾ ಆನಂದ್ ಹೆಜ್ಜೆ ಹಾಕಿದ್ದಾರೆ..' ಎಂದು ಮಾಹಿತಿ ಹಂಚಿಕೊಂಡರು.
ಈ ಸಿನಿಮಾಗೆ ಕಿರಣ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಹಣವನ್ನು ಪಿ.ಕೆ.ಹೆಚ್ ದಾಸ್ ಮಾಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ. ಹರೀಶ್, ನಿರ್ಮಾಪಕ ಸಂಜಯ್ ಗೌಡ, ರವಿ ಗೌಡ, ಗೋವಿಂದರಾಜು, ರಾಜೇಶ್ ಮುಂತಾದವರು 'ಸೂತ್ರಧಾರಿ' ಚಿತ್ರದ ಹಾಡಿನ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಹಾರೈಸಿದರು. ಕಿರುತೆರೆ ಸೂಪರ್ ಸ್ಟಾರ್ ಎಂದು ಖ್ಯಾತರಾಗಿರುವ ಬೇಬಿ ವಂಶಿಕಾ ಅಂಜನಿ ಕಶ್ಯಪ ಕೆಲವು ಸಮಯ ಕಾರ್ಯಕ್ರಮದ ನಿರೂಪಣೆ ಮಾಡಿದ್ದು ವಿಶೇಷವಾಗಿತ್ತು.
Chandan Shetty Sanjana Anand Starrer Suthradaari Kannada Movie Dash Song Released.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm