ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್ವುಡ್ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm