ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.

2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.

ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm