ಬ್ರೇಕಿಂಗ್ ನ್ಯೂಸ್
31-01-23 01:11 pm Source: news18 ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ 'ಎಮರ್ಜೆನ್ಸಿ' ಸಿನಿಮಾದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಟಿ ಯಾವಾಗಲೂ ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗಲೂ ನಟಿ ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 'ಎಮರ್ಜೆನ್ಸಿ' ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಮಾಡಿದ ನಂತರ ಕಂಗನಾ ಈಗ ಮತ್ತೊಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ಸಿನಿಮಾ ಬಗ್ಗೆ ಒಂದು ಪ್ರಮುಖ ಅಪ್ಡೇಟ್ ಹೊರಬಿದ್ದಿದೆ.
ನಟಿ ಕಂಗನಾ ರಣಾವತ್ ಈಗ ಚಂದ್ರಮುಖಿ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ರಾಜನ ಆಸ್ಥಾನ ನರ್ತಕಿ ಚಂದ್ರಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಕಂಗನಾ ರಣಾವತ್ ಅವರು ಚಂದ್ರಮುಖಿ 2 ರ ಕ್ಲೈಮ್ಯಾಕ್ಸ್ ಸಾಂಗ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಈ ವಿಚಾರನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.
'ನಾನು ಕಲಾ ಮಾಸ್ಟರ್ಜಿ ಅವರೊಂದಿಗೆ ಚಂದ್ರಮುಖಿ 2 ಸಿನಿಮಾದ ಕ್ಲೈಮ್ಯಾಕ್ಸ್ ಹಾಡನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದ್ದೇನೆ. ಈ ಹಾಡನ್ನು ಗೋಲ್ಡನ್ ಗ್ಲೋಬ್ ವಿಜೇತ ಶ್ರೀ ಎಂಎಂ ಕೀರವಾಣಿ ಜಿ ಅವರು ಸಂಯೋಜಿಸಿದ್ದಾರೆ. ಶ್ರೀ ಪಿ. ವಾಸು ಈ ಸಿನಿಮಾ ನಿರ್ದೇಶಿಸಿದ್ದಾರೆ ಎಂದು ಬರೆದಿದ್ದಾರೆ. ಚಂದ್ರಮುಖಿಯು ಮಲಯಾಳಂ ಸಿನಿಮಾ ಮಣಿಚಿತ್ರತಾಳು ರೀಮೇಕ್ ಆಗಿದೆ. ಹಿಂದಿಯಲ್ಲಿ ಈ ಸಿನಿಮಾ ಭೂಲ್ ಭುಲೈಯಾ ಎಂದು ರಿಮೇಕ್ ಆಯಿತು. ಇದರಲ್ಲಿ ಅಕ್ಷಯ್ ಕುಮಾರ್ ಅಭಿನಯಿಸಿದ್ದಾರೆ.
ಚಂದ್ರಮುಖಿ 2 ಪಿ. ವಾಸು ನಿರ್ದೇಶಿಸಿದ್ದಾರೆ. ಚಂದ್ರಮುಖಿ ಪಾತ್ರಕ್ಕಾಗಿ ಕಂಗನಾ ತುಂಬಾ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಮೊಲದ ಭಾಗ ಚಂದ್ರಮುಖಿಯಲ್ಲಿ ಜ್ಯೋತಿಕಾ, ರಜನೀಕಾಂತ್ ನಟಿಸಿದ್ದರು. ಈ ಸಿನಿಮಾದಲ್ಲಿ ಕಾಂಚನಾ ನಟ ರಾಘವ್ ಲಾರೆನ್ಸ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ರಜನೀಕಾಂತ್ ನಟಿಸುತ್ತಾರಾ ಎನ್ನುವ ಬಗ್ಗೆ ಸ್ಪಷ್ಟನೆ ಇಲ್ಲ.
kangana Ranaut Rehearses for Climax Song in Chandramukhi 2.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am