ಬ್ರೇಕಿಂಗ್ ನ್ಯೂಸ್
01-02-23 01:42 pm Source: Vijayakarnataka ಸಿನಿಮಾ
ಎಲ್ಲಾ ಸ್ಟಾರ್ಗಳು ಹೊಸತನದ ಕಥೆಗಳತ್ತ ತಮ್ಮ ಚಿತ್ತ ಹರಿಸುತ್ತಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಸಹ ಇದೇ ಹಾದಿಯಲ್ಲಿದ್ದು, ತಮ್ಮ ಎಂದಿನ ಸ್ಟೈಲ್ನ ಸಿನಿಮಾ ಬಿಟ್ಟು ಹೊಸ ನಿರ್ದೇಶಕ ಅನೀಸ್ ಎಂಬುವರ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ 'ಗೌರಿ ಶಂಕರ' ಎಂದು ಹೆಸರಿಡಲಾಗಿದ್ದು, ಇದರಲ್ಲಿ ರವಿಚಂದ್ರನ್ ಇದುವರೆಗೆ ನಿರ್ವಹಿಸದೇ ಇರುವಂತಹ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ತಮಿಳು ಚಿತ್ರರಂಗದಲ್ಲಿ ಕೆಲವು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಅನೀಸ್ಗೆ ಇದು ಮೊದಲ ಸಿನಿಮಾ. ಮೊದಲ ಸಿನಿಮಾದಲ್ಲಿಯೇ ಅವರು ರವಿಚಂದ್ರನ್ನಂಥ ನಟರನ್ನು ಸೇರಿಸಿ ಪ್ರಯೋಗ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕಾಸ್ಟ್ಯೂಮ್ ಸೇರಿದಂತೆ ಎಲ್ಲ ವಿಚಾರದಲ್ಲಿಯೂ ಪ್ರಯೋಗವೇ ಆಗಿದೆ.

ಮೂರು ಪ್ರಮುಖ ಪಾತ್ರ
'ಗೌರಿ ಶಂಕರ' ಸಿನಿಮಾದಲ್ಲಿ ರವಿಚಂದ್ರನ್, ಅಪೂರ್ವ ಗಂಡ ಹೆಂಡತಿಯಾಗಿ ನಟಿಸುತ್ತಿದ್ದಾರೆ. ಇವರ ಜತೆಗೆ ಒಂದು ಪುಟ್ಟ ಮಗು ಇರುತ್ತದೆ. ಈ ಮೂರೇ ಪಾತ್ರಗಳು ಸಿನಿಮಾದಲ್ಲಿ ಪ್ರಮುಖವಾಗಿರುತ್ತವೆ. ಇದನ್ನು ಬಿಟ್ಟರೆ ಹತ್ತು ಕೋಟಿ ರೂಪಾಯಿ ಬೆಲೆಬಾಳುವ ನಾಯಿ ಸಹ ಪ್ರಮುಖ ಪಾತ್ರದಲ್ಲಿದೆ. ಸಿನಿಮಾದಲ್ಲಿ ಹುಲಿ ಸಹ ನಟಿಸುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

ಪೇಂಟರ್ ರವಿಚಂದ್ರನ್
ಈ ಸಿನಿಮಾದಲ್ಲಿ ಕ್ರೇಜಿಸ್ಟಾರ್ ದೇಶ ಕಂಡ ಬಹುದೊಡ್ಡ ಕುಂಚ ಕಲಾವಿದನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆ ಕಲಾವಿದ ಪತ್ನಿ ಮಗಳ ಜತೆಗೆ ಕಾಡಿಗೆ ಬಂದು ಅಲ್ಲಿ ಸೆಟಲ್ ಆಗಿರುತ್ತಾನೆ. ಈ ಸಮಯದಲ್ಲಿ ನಡೆಯುವ ಗಂಡ ಹೆಂಡತಿ ನಡುವಿನ ಮುನಿಸೇ ಸಿನಿಮಾದ ಕಥೆ. 'ರವಿಚಂದ್ರನ್ ವೃತ್ತಿಜೀವನದಲ್ಲಿಇದೊಂದು ವಿಭಿನ್ನ ಸಿನಿಮಾ. ಈ ರೀತಿಯ ಪಾತ್ರದಲ್ಲಿಅವರು ಯಾವತ್ತೂ ಕಾಣಿಸಿಕೊಂಡಿಲ್ಲ' ಎಂದು ನಿರ್ದೇಶಕ ಅನೀಸ್ ಹೇಳಿದ್ದಾರೆ.
'ಗೌರಿ ಶಂಕರ' ಸಿನಿಮಾದ ಚಿತ್ರೀಕರಣ ದಾಂಡೇಲಿ ಕಾಡಿನಲ್ಲಿ ಸುಮಾರು 15 ದಿನಗಳಿಂದ ನಡೆಯುತ್ತಿದೆ. ಮುಂದಿನ ಶೆಡ್ಯೂಲ್ ಯಲ್ಲಾಪುರ ಕಾಡಿನಲ್ಲಿ ನಡೆಯಲಿದೆ. ಇಡೀ ಸಿನಿಮಾದ ಶೇ. 80ರಷ್ಟು ದೃಶ್ಯಗಳು ಕಾಡಿನಲ್ಲಿ ನಡೆಯಲಿದ್ದು, ನಂತರ ಬೆಂಗಳೂರು ಮತ್ತು ಬ್ಯಾಂಕಾಕ್ನಲ್ಲಿ ಚಿತ್ರೀಕರಣ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.
'ಗೌರಿ ಶಂಕರ' ಸಿನಿಮಾದಲ್ಲಿ ರವಿಚಂದ್ರನ್ ಪಾತ್ರವೇ ಹೈಲೈಟ್. ಅವರ ವೃತ್ತಿಬದುಕಿನಲ್ಲಿ ಇದೊಂದು ವಿಭಿನ್ನ ಮತ್ತು ವಿಶಿಷ್ಟ ಸಿನಿಮಾ. ಪ್ರೇಕ್ಷಕರಿಗೂ ಹೊಸ ಅನುಭವ ನೀಡುವಂತಹ ಚಿತ್ರವಿದು ಎಂದಿದ್ದಾರೆ ನಿರ್ದೇಶಕ ಅನೀಸ್.
Crazy Star To Play Lead In Kannada Movie Gowri Shankara Along With Apoorva.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm