ಬ್ರೇಕಿಂಗ್ ನ್ಯೂಸ್
02-02-23 02:23 pm Source: news18 ಸಿನಿಮಾ
ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಹೊರತುಪಡಿಸಿ ರಾಜ್ ಬಿ. ಶೆಟ್ಟಿ ಅವರು ಭರ್ಜರಿಯಾದ ಸಿನಿಮಾ ಒಂದನ್ನು ರೆಡಿ ಮಾಡುತ್ತಿದ್ದಾರೆ. ರಾಜ್ ಬಿ. ಶೆಟ್ಟಿ ಅವರ ಸಿನಿಮಾ ಕೆರಿಯರ್ನಲ್ಲಿಯೇ ಅವರು ಮಾಡುತ್ತಿರುವಂತಹ ಬಿಗ್ ಬಜೆಟ್ ಸಿನಿಮಾ ಇದಾಗಿದೆ. ಹೌದು. ರಾಜ್ ಬಿ. ಶೆಟ್ಟಿ ಅವರು ದೊಡ್ಡಮಟ್ಟದಲ್ಲಿ ಬಂಡವಾಳವನ್ನು ಹಾಕಿ ಈ ಸಿನಿಮಾ ಮಾಡುತ್ತಿದ್ದಾರೆ.
90% ಶೂಟಿಂಗ್ ಕಂಪ್ಲೀಟ್
ಅದ್ಯಾವಾಗ ಶೂಟಿಂಗ್ ಮಾಡಿದ್ರೋ ಗೊತ್ತಿಲ್ಲ. ಈ ಬಿಗ್ ಬಜೆಟ್ ಸಿನಿಮಾದ ಶೇ.90ರಷ್ಟು ಚಿತ್ರೀಕರಣ ಪೂರ್ತಿಯಾಗಿದೆ. ಉಡುಪಿ, ಮಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಶೂಟಿಂಗ್ ಕೂಡಾ ಮಾಡಲಾಗಿದೆ.

ಲವ್ ಸ್ಟೋರಿ ಅಲ್ಲ, ಆದ್ರೆ ಇಬ್ಬರು ಹೀರೋಯಿನ್ಸ್ ಇದ್ದಾರೆ
ಈ ಚಿತ್ರ ಖಂಡಿತಾ ಲವ್ ಸ್ಟೋರಿ ಸಿನಿಮಾ ಅಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ರಾಜ್ ಬಿ. ಶೆಟ್ಟಿ ಅವರ ಸಿನಿಮಾ ಲಿಸ್ಟ್ ತೆಗೆದು ನೋಡಿದರೆ ಅವರು ಮಾಡಿರುವ ಸಿನಿಮಾಗಳ ಕಾನ್ಸೆಪ್ಟ್ ನಿಜಕ್ಕೂ ವಿಭಿನ್ನವಾಗಿದೆ. ಹೊಸತನ ಪ್ರಯೋಗ ಮಾಡುವ ರಾಜ್ ಬಿ. ಶೆಟ್ಟಿ ಅವರ ಚಿತ್ರಗಳಲ್ಲಿ ಕಥೆ, ಸಿನಿಮಾದ ರೀತಿ ಎಲ್ಲವೂ ಡಿಫರೆಂಟಾಗಿರುತ್ತದೆ. ವಾಸ್ತವಕ್ಕೆ ಅತ್ಯಂತ ಹತ್ತಿರದಲ್ಲಿ ನಿಂತು ಸೂಕ್ಷ್ಮ ವಿಚಾರವೊಂದನ್ನು ಎಳೆ ಎಳೆಯಾಗಿ ಪ್ರೇಕ್ಷಕರ ಮುಂದೆ ಬಿಚ್ಚಿಡುವುದರಲ್ಲಿ ರಾಜ್ ಬಿ. ಶೆಟ್ಟಿ ನಿಸ್ಸೀಮರು.
ಈಗ ಈ ಸಿನಿಮಾದಲ್ಲಿ ಇಬ್ಬರು ಹೀರೋಯಿನ್ಸ್ ಇದ್ದಾರೆ. ನಟಿ ಸಂಯುಕ್ತಾ ಹೊರನಾಡು ಅವರು ನಟಿಸುತ್ತಿದ್ದು ಅವರೊಂದಿಗೆ ಮತ್ತೊಬ್ಬ ಹೀರೋಯಿನ್ ಕೂಡಾ ಸಾಥ್ ಕೊಡುತ್ತಿದ್ದಾರೆ. ಆದರೆ ಈ ಸಿನಿಮಾ ಲವ್ ಸ್ಟೋರಿ, ಅಥವಾ ರೊಮ್ಯಾಂಟಿಕ್ ಸಿನಿಮಾ ಅಲ್ಲ.
ಕೊನೆಯ ಶೆಡ್ಯೂಲ್ ಚಿತ್ರೀಕರಣ
ಈಗಾಗಲೇ ಹೇಳಿದಂತೆ ಈ ಸಿನಿಮಾದಲ್ಲಿ ಶೇ.90ರಷ್ಟು ಚಿತ್ರೀಕರಣ ಪೂರ್ತಿಗೊಂಡಿದ್ದು ಇನ್ನು ಕೊನೆಯ ಶೆಡ್ಯೂಲ್ ಮಾತ್ರ ಬಾಕಿ ಇದೆ. ಈ ಸಿನಿಮಾದ ಕೊನೆಯ ಶೆಡ್ಯೂಲ್ ಶೂಟಿಂಗ್ ಆರಂಭವಾಗಿದ್ದು ಇನ್ನೊಂದು ವಾರದೊಳಗೆ ಈ ಬಿಗ್ ಬಜೆಟ್ ಸಿನಿಮಾ ಚಿತ್ರೀಕರಣ ಪೂರ್ತಿಯಾಗಲಿದೆ.
ಬಂಡವಾಳ ಹಾಕಿರೋದು ಯಾರು?
ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಮೂಲಕ ಈ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ. ಅಗಸ್ತ್ಯ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.
Raj B Shetty Big Budget movie already completed 90 percent shooting is not a Love story here is the Exclusive Update.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm