ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.
ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm